Saturday, September 28, 2024
Saturday, September 28, 2024

CPI Chikkamagalurನಿರಾಶ್ರಿತರಿಗೆ ನಿವೇಶನ ಹಂಚಲು ಚಿಕ್ಕಮಗಳೂರು ಜಿಲ್ಲಾ ಸಿಪಿಐ ಒತ್ತಾಯ

Date:

CPI Chikkamagalur ಚಿಕ್ಕಮಗಳೂರು ತಾಲ್ಲೂಕಿನ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐ ಹಾಗೂ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದ ಚಳುವಳಿ ಇಂದಿಗೆ ನಾಲ್ಕನೇ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಉಪವಾಸ ಸತ್ಯಾಗ್ರಹ ಮತ್ತು ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ರಾಧಾಸುಂದ್ರೇಶ್ ಎಚ್ಚರಿಸಿದರು.

CPI Chikkamagalur ಪ್ರತಿಭಟನಾ ವೇಳೆಯಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ದಿನಗಳಿಂದ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಜಿಲ್ಲಾಡಳಿತ ಅಥವಾ ಜನಪ್ರತಿನಿಧಿಗಳಾಗಲೀ ಪ್ರಶ್ನಿಸದೇ ತಮ್ಮ ಪಾಡಿಗೆ ಇರು ವುದು ವ್ಯಕ್ತವಾಗುತ್ತಿದ್ದು ಸೋಮವಾರದ ನಂತರ ಉಗ್ರವಾದ ಚಳುವಳಿ ನಡೆಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ, ತಹಶೀಲ್ದಾರ್‌ರವರು ಪ್ರತಿಭಟನೆ ನಡೆಸುತ್ತಿದ್ದವವರ ಸ್ಥಳಕ್ಕೆ ಭೇಟಿ ನೀಡದೇ ಸುಖಸುಮ್ಮನೆ ಕೆಲಸ ಮಾಡುತ್ತಿದ್ದಾರೆ. ಭಾರತದ ದೇಶದ ಪ್ರಜೆಗಳಾದ ನಿವಾಸಿಗಳಾದ ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸುವಲ್ಲಿ ವಿಳಂಭ ಧೋರಣೆ ತಾಳಿರುವುದು ಸರಿಯಾದ ವಿಚಾರ ಎಂದು ದೂರಿದರು.

ಬಿಜೆಪಿ ವಕ್ತಾರರಂತೆ ಜಿಲ್ಲಾ ದಂಡಾಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಲ್ಲಿನ ನೂರಾರು ಕೂಲಿಕಾರ್ಮಿಕರು ಸರ್ಕಾರದ ಭೂಮಿಯನ್ನು ನಿವೇಶನಕ್ಕಾಗಿ ಒತ್ತಾಯಿಸಿದ್ದಾರೆಯೇ ಹೊರತು ಬಂಗಾಲೆ ನಿರ್ಮಿಸಿ ಕೊಡಿ ಎಂದು ಕೇಳುತ್ತಿಲ್ಲ. ಇದನ್ನು ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಅರಿತುಕೊಂಡು ಸಮಸ್ಯೆ ಬಗೆಹರಿಸುವಲ್ಲಿ ಮುಂದಾಗಬೇಕು ಎಂದರು.

ಇದೇ ರೀತಿ ಕಾರ್ಮಿಕರನ್ನು ನಿರ್ಲಕ್ಷೀಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾದರೆ ಸೋಮವಾರ ನಂತರ ಚಳುವಳಿ ರೂಪ ಬದಲಾಗಲಿದ್ದು ಒಂದು ತಂಡ ಉಪವಾಸ ಸತ್ಯಾಗ್ರಹ ನಡೆಸಿದರೆ ಇನ್ನೊಂ ದೆಡೆ ಎಲ್ಲಾ ತಾಲ್ಲೂಕು ಸಂಘದಿಂದ ರ‍್ಯಾಲಿಗಳ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.

ನಂತರ ಒಂದೊಂದು ದಿನವು ಆಯಾ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಪಂಚಾಯಿತಿಗೆ ಬೀಗ ಹಾಕುವ ಮೂಲಕ ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುವುದು. ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸದಿದ್ದಲ್ಲಿ ಸಿಪಿಐ ಹಾಗೂ ಕಟ್ಟಡ ಕಾರ್ಮಿಕರ ಸಂಘದಿಂದ ಕೂಲಿ ಕಾರ್ಮಿಕರಿಗೆ ನ್ಯಾಯ ದೊರೆಯುವವರೆಗೂ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಪಕ್ಷದ ನಗರ ಕಾರ್ಯದರ್ಶಿ ವಸಂತ್‌ಕುಮಾರ್ ಮಾತನಾಡಿ ಪ್ರತಿಭಟನೆಯು ಮೊದಲನೇ ದಿನದಲ್ಲಿ ಕಡವಂತಿ, ಎರಡನೇ ದಿನ ಬೆಳಗುಳ, ಮೂರನೇ ದಿನ ಮಲ್ಲಂದೂರು, ನಾಲ್ಕನೇ ದಿನವಾದ ಇಂದು ಆಲ್ದೂರು ನಿವೇಶನ ರಹಿತರು ಪ್ರತಿಭಟನೆ ನಡೆಸುತ್ತಿದ್ದು ಐದನೇ ದಿನಕ್ಕೆ ಬಣಕಲ್ ಗ್ರಾಮಸ್ಥರು ಬರಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಖಜಾಂಚಿ ಹೆಚ್.ಎಂ.ರೇಣುಕಾರಾಧ್ಯ, ಸಹ ಕಾರ್ಯದರ್ಶಿ ಜಿ.ರಘು, ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್, ಸೋಮೇಗೌಡ ಆಲ್ದೂರು ಗ್ರಾಮಸ್ಥರಾದ ರವಿ, ಹೆಡದಾಳು ಕುಮಾರ್ ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...