Chikmagalur ಬಲಿಜ ಸಂಘದ ಬೆಳವಣಿಗೆಗೆ ಜನಾಂಗದ ಪ್ರತಿಯೊಬ್ಬರು ಕೈಜೋಡಿ ಸುವಲ್ಲಿ ಮುಂದಾದಾಗ ಮಾತ್ರ ಸಂಘವನ್ನು ಜಿಲ್ಲಾ ಮಟ್ಟದಲ್ಲಿ ಹೆಚ್ಚು ಅಭಿವೃದ್ದಿಗೊಳಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಸಿ.ಎನ್.ನರೇಂದ್ರನಾಥ್ ಹೇಳಿದರು.
ಚಿಕ್ಕಮಗಳೂರು ನಗರದ ಲಯನ್ಸ್ ಸೇವಾ ಭವನದಲ್ಲಿ ಜಿಲ್ಲಾ ಬಲಿಜ ಸಂಘದ ಸರ್ವ ಸದಸ್ಯರ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಸಣ್ಣ ಸಮುದಾಯವಾಗಿರುವ ಬಲಿಜ ಜನಾಂಗದವರು ರಾಜಕೀಯ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ಮುಂಬರುವ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ಜನಾಂಗದ ಬೆಳವಣಿಗೆಗೆ ಮುಂದಾಗ ಬೇಕು ಎಂದು ಸಲಹೆ ಮಾಡಿದರು.
ಸಂಘದ ಗೌರವ ಸಲಹೆಗಾರ ಕೆ.ವೆಂಕಟೇಶ್ ಮಾತನಾಡಿ ಜಲಿವು ಸಮುದಾಯವು ಜಿಲ್ಲೆಯಲ್ಲಿ ಸುಮಾರು 21 ಉಪಪಂಡಗಳನ್ನು ಹೊಂದಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಕಷ್ಟವನ್ನು ಎದುರಿಸುತ್ತಿದೆ. ಇದನ್ನು ನಿವಾರಿಸುವ ಎಲ್ಲರೂ ಒಗ್ಗಟ್ಟಾಗಿ ಮುಂದಾಗಿದ್ದಲ್ಲಿ ಜನಾಂಗ ಬೆಳವಣಿಗೆಯಾಗಲು ಸಾಧ್ಯ ಎಂದರು.
Chikmagalur ತಾಲ್ಲೂಕು ಸಂಘದ ಅಧ್ಯಕ್ಷ ದೇವರಾಜ್ ಮಾತನಾಡಿ ಎಂತಹ ಸಂಕಷ್ಟದ ಸಮಯದಲ್ಲಿದ್ದರೂ ಸಮುದಾ ಯವು ಒಗ್ಗಟ್ಟನ್ನು ಪ್ರದರ್ಶಿಸಬೇಕು. ಎಲ್ಲರನ್ನು ಜೊತೆಗೂಡಿಸಿಕೊಂಡು ಜನಾಂಗದ ಸಭೆ, ಸಮಾರಂಭಗಳಿಗೆ ಭಾಗವಹಿಸಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ನೂತನ ಪದಗ್ರಹಣ ಪದಾಧಿಕಾರಿಗಳ ಆಯ್ಕೆಯನ್ನು ಹಿಂದಿನ ಕಮಿಟಿಯನ್ನು ಮುಂದುವರೆಸಿ ಕೊಂಡು ನಂತರ ಬದಲಾವಣೆ ಮಾಡಿಕೊಳ್ಳಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಉಪಾಧ್ಯಕ್ಷರಾದ ರಂಗನಾಥಶೆಟ್ಟಿ, ಜಿ.ನಾಗರಾಜ್, ಉಮಾಶಂಕರ್ ನಾಯ್ಡು, ಪ್ರಧಾನ ಕಾರ್ಯದರ್ಶಿ ಕೆ.ವಿ.ಶ್ರೀಧರ್, ಖಜಾಂಚಿ ರತೀಶ್ಕುಮಾರ್, ಹಿರಿಯ ಮುಖಂಡ ತಿರುಪಾಲಯ್ಯ, ತರೀಕೆರೆ ಅಧ್ಯಕ್ಷ ಶಿವಣ್ಣ, ಮೂಡಿಗೆರೆ ಅಧ್ಯಕ್ಷ ದಿವಾಕರ, ಬೀರೂರು ಅಧ್ಯಕ್ಷ ರಾಜೇಶ್, ಸದಸ್ಯ ಆನಂದಶೆಟ್ಟಿ, ಮುಖಂಡರುಗಳಾದ ತನೋಜ್ ನಾಯ್ಡು, ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.