Sunday, December 14, 2025
Sunday, December 14, 2025

SAIL VISL ವತಿಯಿಂದ ಉಕ್ಕುಂದ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ

Date:

SAIL-VISL ವತಿಯಿಂದ VISL ಆಸ್ಪತ್ರೆ, ಸಹ್ಯಾದ್ರಿ ನಾರಾಯಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ದಿನಾಂಕ ೧-೩-೨೦೨೩ ರಂದು ಉಕ್ಕುಂದ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಸಾಮಾನ್ಯ ಆರೋಗ್ಯ, ಹೃದಯ, ಕಣ್ಣಿನ, ಮೂಳೆ, ದಂತ ಚಿಕಿತ್ಸೆಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು.

SAIL-VISL ಕಾರ್ಯಕ್ರಮವನ್ನು ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ), ಡಾ|| ಎಮ್.ವೈ.ಸುರೇಶ್, ಮುಖ್ಯ ವೈಧ್ಯಾಧಿಕಾರಿ, ಶ್ರೀ ರಾಕೇಶ್, ಟೆಕ್ನಿಕಲ್ ಅಧಿಕಾರಿ, ಕೃಷಿ ಇಲಾಖೆ, ಶ್ರೀ ಅನು, ಸದಸ್ಯರು, ಅಂತರಗಂಗೆ ಗ್ರಾಮಪಂಚಾಯಿತಿ, ಶ್ರೀ ತಿಮ್ಮೇಗೌಡ, ಅಧ್ಯಕ್ಷರು, ಸ್ನೇಹಜೀವಿ ರೈತ ಶಕ್ತಿ ಸಂಘ ಉದ್ಘಾಟಿಸಿದರು.

VISL ಆಸ್ಪತ್ರೆಯ ತಜ್ಞರಾದ ಡಾ|| ಎಮ್.ವೈ.ಸುರೇಶ್ ಮತ್ತು ಡಾ|| ಎಸ್.ಎನ್. ಸುರೇಶ್, ಸಾಮಾನ್ಯ ಆರೋಗ್ಯ, ಮೂಳೆ ಮತ್ತು ದಂತ ಸಮಸ್ಯೆಗಳ ಬಗ್ಗೆ ತಜ್ಞರ ಸಲಹೆಯನ್ನು ನೀಡಿದರು. ಶ್ರೀಮತಿ ಅನಿತ, ಶ್ರೀ ಟಿ.ಎನ್. ಕೃಷ್ಣ, ಶ್ರೀ ಅಲೆನ್ ಜುಡೊ ಪಿಂಟೊ, ಶ್ರೀ ಮಧುಕರ್, ಶ್ರೀ ಶಿವಶಂಕರ್ ನಾಯಕ್ ಮತ್ತು ಶ್ರೀ ಆರ್. ಮಂಜುನಾಥ್ ಸಹಕರಿಸಿದರು.

ಶಂಕರ ಕಣ್ಣಿನ ಆಸ್ಪತ್ರೆಯ ತಜ್ಞರಾದ ಡಾ|| ಕೃತಿಕ್, ಶ್ರೀ ಮಹೇಶ್ ರಾಯ್ಕರ್, ಶ್ರೀ ಜಸ್ಟೀನ್ ಮತ್ತು ಸ್ವರ್ಣ ನೇತ್ರ ಪರೀಕ್ಷೆಗಳನ್ನು ನಡೆಸಿ ನೇತ್ರ ಆರೈಕೆಯ ಬಗ್ಗೆ ತಜ್ಞರ ಸಲಹೆಯನ್ನು ನೀಡಿದರು.

SAIL-VISL ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞರಾದ ಡಾ|| ಶರತ್, ಡಾ|| ಮತಿನ್ ಹಯಾತ್, ಶ್ರೀಮತಿ ತಾಸಿನಾ, ಶ್ರೀಮತಿ ಮೋಬಿನಾ, ಶ್ರೀ ಗಣೇಶ್ ಅವರು ಹೃದಯ ಸಂಬಂಧಿ ಪರೀಕ್ಷೆಗಳನ್ನು ನಡೆಸಿ, ಹೃದ್ರೋಗ ಆರೈಕೆಯ ಬಗ್ಗೆ ತಜ್ಞರ ಸಲಹೆಯನ್ನು ನೀಡಿದರು.

203 ಗ್ರಾಮಸ್ಥರು ಈ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಸಂದರ್ಭದಲ್ಲಿ ಉಕ್ಕುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು SAIL-VISL ವತಿಯಿಂದ ನೀಡಲಾಯಿತು. ಶ್ರೀಮತಿ ಶೋಭ.ಕೆ.ಎಸ್, ಸಹಾಯಕ ಪ್ರಬಂಧಕರು (ಸಿಬ್ಬಂದಿ ಮತ್ತು ಸಿ.ಎಸ್.ಆರ್) ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು VISL ಆಸ್ಪತ್ರೆ, ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಅಂತರಗಂಗೆ ಗ್ರಾಮ ಪಂಚಾಯಿತಿ, ಸ್ನೇಹಜೀವಿ ರೈತ ಶಕ್ತಿ ಸಂಘದವರ ಸಹಯೋಗದೊಂದಿಗೆ ಸಂಯೋಜಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...