Tuesday, October 1, 2024
Tuesday, October 1, 2024

Chikmagalur ದಲಿತ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಆರೋಪ

Date:

Chikmagalur ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯವರು ಭಾರೀ ಭ್ರಷ್ಟಾಚಾರ ಹಾಗೂ ದಲಿತರ ನೌಕರರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ದಲಿತ ಸಂಘಟನೆಗಳ ಐಕ್ಯತಾ ಚಾಲನ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಆಯುಕ್ತ ರಾಕೇಶ್ ಅವರಿಗೆ  ಬೆಂಗಳೂರಿಗೆ ತೆರಳಿ ಮನವಿ ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಚೈತ್ರ ಅವರು ಭಾರೀ ಭ್ರಷ್ಟಚಾರ ಹಾಗೂ ದಲಿತರನ್ನು ಅವಮಾನಿಸಿ ಅಧಿಕಾರದಲ್ಲಿ ಮೆರೆಯುತ್ತಿದ್ದು ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ವಿದ್ಯಾರ್ಥಿ ನಿಲಯಕ್ಕೆ ಹೈಮಾಸ್ಕ್ ಲೈಟ್‌ಗಳ ಖರೀದಿಯಲ್ಲಿ ಕಳಪೆ ಗುಣಮಟ್ಟದ ಉಪಕರಣಗಳನ್ನು ಖರೀದಿಸಿ ಭ್ರಷ್ಟಚಾರ ಎಸಗಲಾಗಿದೆ. ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನಿರ್ವಹಣೆ ವೆಚ್ಚದ ಅನುದಾನವನ್ನು ಯಾವುದೇ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಲಕ್ಷಾಂತರ ಮೌಲ್ಯದ ಸ್ಟೀಮ್ ಕುಕ್ಕರ್ ಖರೀದಿಸಿ ನಂತರ ನೇರ ಯಂತ್ರಪಕರಣಗಳನ್ನು ಸ್ಥಾಪಿಸಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.

Chikmagalur ವಿದ್ಯಾರ್ಥಿನಿಲಯಗಳ ನಾಮಫಲಕವನ್ನು ಅತಿಹೆಚ್ಚಿನ ಮೊತ್ತಕ್ಕೆ ಕೊಟೇಷನ್ ಮೂಲಕ ಮಾಡಿದ್ದು ಇದು ಕೆಟಿಟಿಪಿ ಕಾಯ್ದೆಯ ವಿರುದ್ಧವಾಗಿದೆ. ಜೊತೆಗೆ ನೇರ ಟೆಂಡರ್ ಮಾಡದೇ ನಿರ್ಲಕ್ಷ್ಯ ವಹಿಸಿರುವುದರಿಂದ ಹಣ ದುರುಪಯೋಗವಾಗಿದೆ. ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯ ಆಹಾರ ಬೇಡಿಕೆಯಲ್ಲಿ ಭಾರಿ ಅವ್ಯವಹಾರ ಮಾಡಿ ಭ್ರಷ್ಟಚಾರವೆಸಗಲಾಗಿದೆ ಎಂದು ದೂರಿದರು.

ಕೊಪ್ಪ, ಎನ್.ಆರ್.ಪುರ ಹಾಗೂ ಶೃಂಗೇರಿಯಲ್ಲಿ ಲೆಕ್ಕ ಅಧೀಕ್ಷಕರ ಹುದ್ದೆಗಳನ್ನು ಹಣದ ಆಸೆಗಾಗಿ ನೀಡಿ ಆಡಳಿತ ದುರ್ಬಳಕೆಯಾಗಿದೆ. ಉಪನಿರ್ದೇಶಕರಾಗಿ ಚೈತ್ರ ಅವರು ಈ ಹಿಂದೆ ಕರ್ತವ್ಯ ನಿರ್ವಹಿಸಿದ ಹಾವೇರಿ ಜಿಲ್ಲೆಯ ಸರಕು- ಸೇವದಾರರಿಂದ ಮಾತ್ರ ಹೆಚ್ಚಿನ ಸರಕನ್ನು ಖರೀದಿಸಿರುವುದು ಎಷ್ಟರ ಮಟ್ಟಿಗೆ ಸರಿಯಿದೆ ಎಂದು ಪ್ರಶ್ನಿಸಿದ್ದಾರೆ.

ಕೂಡಲೇ ಎಲ್ಲಾ ಅಂಶಗಳನ್ನು ಪರಿಗಣಿಸಿ ಸಮಾಜ ಕಲ್ಯಾಣಾಧಿಕಾರಿ ಚೈತ್ರ ಹಾಗೂ ಇವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಪ್ರಗತಿಪರ ಚಿಂತಕ ಅಂಗಡಿ ಚಂದ್ರು, ಸಂತೋಷ ದಾವಣಗೆರೆ, ಜಿಲ್ಲಾ ಪ್ರಧಾನ ಸಂಚಾಲಕ ದುಗ್ಗಪ್ಪ, ಹಾವೇರಿ ಜಿಲ್ಲಾ ಪ್ರಧಾನ ಸಂಚಾಲಕ ಮೆಣಸಿನಹಾಳ ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...