Sports Competition ಶಿವಮೊಗ್ಗ, ವಿದ್ಯಾನಗರದ ಆಶಾಕಿರಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಮಧ್ಯಮದರ್ಜೆಯ ಬುದ್ಧಿಮಾಂದ್ಯ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಉಚಿತ ತರಬೇತಿ ಹಾಗೂ ಪುನಶ್ಚೇತನ ಕಾರ್ಯಕ್ರಮವನ್ನು ಕಳೆದ 42 ವರ್ಷಗಳಿಂದಲೂ ರೋಟರಿ 75ನೇ ವಾರ್ಷಿಕ ದತ್ತಿನಿಧಿ, ರೋಟರಿ ಕ್ಲಬ್ ಶಿವಮೊಗ್ಗ ಇವರ ಪ್ರಾಯೋಜಕತ್ವದಲ್ಲಿ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ಅನುದಾನದ ಸಹಾಯದೊಂದಿಗೆ ಅರ್ಥಪೂರ್ಣವಾಗಿ ನಡೆಸಿಕೊಂಡು ಬರಲಾಗುತ್ತಿದೆ.
Sports Competition ಇದೀಗ ಅಂದರೆ ಮಾ. 7ರಂದು ಆಶಾಕಿರಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ 6ರಿಂದ 18 ವರ್ಷದೊಳಗಿನ ಬುದ್ದಿಮಾಂದ್ಯ ಮಕ್ಕಳಿಗೆ ಕ್ರೀಡೆಗಳನ್ನು ಏರ್ಪಡಿಸಿದೆ.
ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಉಚಿತ ಊಟ ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಸಕ್ತರು ಮಾರ್ಚ್ 6ರೊಳಗಾಗಿ ಹೆಸರು ನೀಡಬೇಕು. ಹೆಚ್ಚಿನ ವಿವರಗಳಿಗೆ ಮಂಜುನಾಥ್,9844055267 , ಎಂ. ಚಂದ್ರಯ್ಯ 9945797120 ಸಂಪರ್ಕಿಸಲು ಸಂಸ್ಥೆಯ ಛೇರ್ಮನ್ ಡಾ. ರಜನಿ ಪೈ ಅವರು ಕೋರಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.