Saturday, September 28, 2024
Saturday, September 28, 2024

Voting ಯುವ ಮತದಾರರಿಗೆ ಕಡ್ಡಾಯ ಮತದಾನ ಮಾಡುವಂತೆ ಪ್ರೇರೇಪಿಸಿ- ಡಾ.ಸೆಲ್ವಮಣಿ

Date:

Voting ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಹಾಗೂ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ವಿಶೇಷ ಮತದಾನ ಅರಿವು ಕಾರ್ಯಕ್ರಮ ಮಾಡುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾ.03 ರಂದು ಮತದಾನ ಜಾಗೃತಿ ಮತ್ತು ಚುನಾವಣಾ ತಯಾರಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಳದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಶೇಷ ತರಬೇತಿ ನೀಡಿದ ಅವರು, ವಿಶೇಷವಾಗಿ ಮತಗಟ್ಟೆ ಮಟ್ಟದಲ್ಲಿ ಮತದಾನ ಅರಿವು ಮೂಡಿಸಲು ತಂಡಗಳನ್ನು ರಚಿಸಿ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಚುನಾವಣಾ ಜಾಗೃತಿ ಬಗ್ಗೆ ಶಾಲಾ, ಕಾಲೇಜು ಹಂತದಲ್ಲಿ ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಶಾಲಾ ಹಾಗೂ ಕಾಲೇಜುಗಳಲ್ಲಿ ಸ್ಥಾಪಿಸಲಾಗಿರುವ ಎಲ್ಲ ಎಲೆಕ್ಟೊರಲ್ ಲಿಟರಸಿ ಕ್ಲಬ್ ಗಳಲ್ಲಿ ಮತದಾನ ಅರಿವು ಮೂಡಿಸುವ ಕಾರ್ಯವಾಗಬೇಕು. ಎಲ್ಲ ತಾಲ್ಲೂಕುಗಳ ಇಓ, ತಹಶೀಲ್ದಾರ್, ಬಿಇಓ ಗಳು ಸ್ವೀಪ್ ಸಮಿತಿ ಮೂಲಕ ಮತದಾನ ಜಾಗೃತಿ ವೇದಿಕೆಗಳನ್ನು ಸಕ್ರಿಯಗೊಳಿಸಿ, ಜನರಲ್ಲಿ ಮತದಾನದ ಅರಿವನ್ನು ಮೂಡಿಸಿ ಹೆಚ್ಚು ಮತದಾನವಾಗುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.

ಎಲ್ಲಾ ತಾಲ್ಲೂಕುಗಳಲ್ಲಿ ಇವಿಎಂ/ವಿವಿ ಪ್ಯಾಟ್ ಮತದಾನ ಯಂತ್ರಗಳ ಪ್ರಾತ್ಯಕ್ಷಿಕೆಯನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯನ್ನು ಭಾಗವಹಿಸಿ ಮತದಾನ ಯಂತ್ರದ ಬಳಕೆ ಬಗ್ಗೆ ತಿಳಿದುಕೊಳ್ಳುವಂತೆ ಅವರು ಕೋರಿದರು.

Voting ಇದೇ ವೇಳೆ ಭಾರತ ಚುನಾವಣಾ ಆಯೋಗ ಹೊರತಂದಿರುವ 2023 ರ ಚುನಾವಣೆ ಮತದಾನ ಜಾಗೃತಿ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಇಓ ಗಳು, ಡಿಡಿಪಿಐ, ಸ್ವೀಪ್ ನೋಡಲ್ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...