Tuesday, October 1, 2024
Tuesday, October 1, 2024

Aam Aadmi Party ಲಂಚಪ್ರಕರಣದ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಆಮ್ ಆದ್ಮಿ ಪಕ್ಷ ದಿಂದ ಖಂಡನೆ

Date:

Aam Aadmi Party ಬಿಜೆಪಿಯ ಕಳಂಕಿತ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಖಂಡಿಸಿ ಜಿಲ್ಲಾ ಆಮ್‌ಆದ್ಮಿ ಪಕ್ಷದ ಮುಖಂಡರುಗಳು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ನಲ್ಲಿ ಸಂಜೆ ಪ್ರತಿಭಟನೆ ನಡೆಸಿದರು.

ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಸ್.ಹೇಮಂತ್ ಕುಮಾರ್ ಮಾತನಾಡಿ ಬಿಜೆಪಿಯ ಶಾಸಕರ ಮನೆಯಲ್ಲಿ ಸುಮಾರು 8 ಕೋಟಿಯಷ್ಟು ಹಣ ವಶಪಡಿಸಿಕೊಂಡು ಅವರನ್ನು ಬಂಧಿಸಿ ನಂತರ ಕೆಲವೇ ದಿನಗಳಲ್ಲಿ ನಿರೀಕ್ಷಣಾ ಜಾಮೀನು ನೀಡಿ ಹೊರತಂದಿರುವುದು ದುರಾದೃಷ್ಟಕರ. ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಡೆಯಾ ಗಿರುವ ಶಾಸಕ ವಿರೂಪಾಕ್ಷಪ್ಪ ಅವರನ್ನು ಕೂಡಲೇ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವು ಇಡಿ ಹಾಗೂ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಎಎಪಿ ನಾಯಕರಾದ ಸಿಸೋಡಿಯಾ ಅವರ ವಿರುದ್ಧ ಯಾವುದೇ ಗುರುತರ ಆರೋಪಗಳು ಇಲ್ಲದಿದ್ದರೂ ಅವರನ್ನು ಬಂಧಿಸಿದೆ. ಆದರೆ ರಾಜ್ಯದಲ್ಲಿ ಶಾಸಕ ವಿರೂಪಾಕ್ಷಪ್ಪ ಅವರಿಗೆ ತನಿಖೆ ವೇಳೆಯಲ್ಲಿ ಕೋಟಿಗಟ್ಟಲೇ ಹಣ ದೊರೆತಿದ್ದರೂ ಬಂಧಿಸಿ ನಂತರ ಜಾಮೀನು ನೀಡಿರುವುದು ಎಷ್ಟರ ಮಟ್ಟಿಗೆ ಸರಿಯಿದೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಸೋಡಿಯಾ ಅವರಿಂದ ತೊಂದರೆಯಾಗಲಿದೆ ಎಂದು ಅರಿತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಈ ರೀತಿಯ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಆಟವಾಡುತ್ತಿದೆ. ಕೂಡಲೇ ಗುರುತರ ಆರೋಪ ಹೊಂದಿರದ ಎಎಪಿ ನಾಯಕರನ್ನು ಬಿಡುಗಡೆಗೊಳಿಸಬೇಕು. ಬಿಜೆಪಿಯ ಶಾಸಕ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಕೆ.ಸುಂದರಗೌಡ ಮಾತನಾಡಿ ಬಹಿರಂಗವಾಗಿ ಭಾರೀ ಭ್ರಷ್ಟಾ ಚಾರವನ್ನು ಹೊತ್ತಿರುವ ಬಿಜೆಪಿಗರ ವಿರುದ್ಧ ಕೂಡಲೇ ರಾಜ್ಯಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದ್ದಲ್ಲಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ದೆಹಲಿಯ ಉತ್ತಮ ನಾಯಕರೆನ್ನಿಸಿಕೊಂಡಿರುವ ಸಿಸೋಡಿಯಾ ಅವರನ್ನು ಬಂಧಿಸಿ ಜಾಮೀನು ಸಹ ನೀಡಿ ರುವುದಿಲ್ಲ. ಆದರೆ ರಾಜ್ಯದಲ್ಲಿ ತದ್ವಿರುದ್ಧವಾಗಿ ಶಾಸಕರ ಮನೆಯಲ್ಲಿ ಕೋಟಿಗಟ್ಟಲೇ ಹಣ ಸಿಕ್ಕರೂ ಕೂಡಾ ಅವರಿಗೆ ಜಾಮೀನು ನೀಡಿರುವುದು ಸರಿಯಾದ ವಿಚಾರವಲ್ಲ. ಕೂಡಲೇ ಶಾಸಕ ವಿರೂಪಾಕ್ಷಪ್ಪ ಅವರನ್ನು ಬಂಧಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

Aam Aadmi Party ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪಕ್ಷದ ಮುಖಂಡರುಗಳು ಶಾಸಕ ಮಾಡಾಲ್ ವಿರೂ ಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಸೈಯದ್ ಜಮೀಲ್ ಅಹ್ಮದ್, ಮೋಹನ್, ಸಲ್ಮಾನ್, ಲಿಂಗಾರಾಧ್ಯ, ರಂಗನಾಥ್, ರಾಜೇಶ್ವರಿ, ಫಿಲೋಮೀನಾ, ಹರ್ಷದ್, ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...