Friday, March 20, 2026
Friday, March 20, 2026

International Women’s Day ಮಹಿಳೆ ಕೇವಲ ಅಡುಗೆಮನೆಗೆ ಸೀಮಿತವಾಗಿರದೇ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ತೋರುತ್ತಿದ್ದಾಳೆ- ಶ್ರೀಶೈಲಾ ಎಸ್.ಮೇಟಿ

Date:

International Women’s Day ಮಹಿಳೆ ಕೇವಲ ಅಡುಗೆ ಮನೆಯಲ್ಲಿ ಸೀಮಿತರಾಗಿರದೇ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಅಪ್ರತಿಮೆ ಸಾಧನೆ ಮಾಡಿ ಯಶಸ್ಸು ಗಳಿಸುವ ಮೂಲಕ ಗಂಡಿನ ಸರಿಸಮಾನವಾಗಿ ಬೆಳೆಯುತ್ತಿದ್ದಾರೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲಾ ಎಸ್.ಮೇಟಿ ಅವರು ಹೇಳಿದರು.

ಚಿಕ್ಕಮಗಳೂರು ನಗರ ಹೊರವಲಯದ ಜಿಲ್ಲಾ ಕಾರಾಗೃಹದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು
ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಹಿಳೆಯು ದೇಶದ ಪ್ರಧಾನಿ, ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿ ಉತ್ತಮ ಯಶಸ್ಸನ್ನು ಗಳಿಸಿದ್ದಾರೆ.

ಕಾರಾಗೃಹದ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಜೊತೆಗೆ ತಮ್ಮ ಸಾಂಸರಿಕ ಜೀವನದಲ್ಲಿ ಗಂಡ, ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಎರಡಲ್ಲೂ ವೃತ್ತಿಯನ್ನು ಶಕ್ತಿಯುತವಾಗಿ ನಿಭಾಯಿಸುತ್ತಿದ್ದಾರೆ ಎಂದು ಬಣ್ಣಿಸಿದರು.

ಪ್ರತಿಯೊಬ್ಬರ ಗಂಡಿನ ಜೀವನದಲ್ಲಿ ಹೆಣ್ಣು ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಮಡದಿಯಾಗಿ, ಸ್ನೇಹಿತೆಯಾಗಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ. ಜೊತೆಗೆ ಸಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಗಂಡಿನ ಯಶಸ್ಸಿಗೆ ಕಾರಣರಾಗಿದ್ದಾರೆ ಎಂದು ತಿಳಿಸಿದರು.

International Women’s Day ಜೈಲರ್ ಎಂ.ಕೆ.ನೆಲಧರಿ ಮಾತನಾಡಿ ಮಹಿಳೆಯು ಸಂಸಾರ ಜೀವನದಲ್ಲಿ ಗಂಡನ ಜೊತೆ ಸಹಪಾಠಿಯಾಗಿ ನಿಲ್ಲುವ ಪರಿಣಾಮವೇ ಇಂದು ಅತಿಎತ್ತರಕ್ಕೆ ಗಂಡ ಮತ್ತು ಮಕ್ಕಳು ಬೆಳೆಯಲು ಸಾಧ್ಯ. ತನ್ನ ಸುಖವನ್ನು ಮಕ್ಕಳು ಗಂಡಿನಿಗೆ ಸೀಮಿತಗೊಳಿಸಿ ಮಹಾತ್ಯಾಗಿಯಾಗಿದ್ದಾರೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಕಾರಾಗೃಹ ಇಲಾಖೆಯ ಸಹಾಯಕ ಜೈಲರ್‌ಗಳಾದ ಅಲೀಮುದ್ದಿನ್, ಬೊಂಗಾಳೆ, ಮುಖ್ಯ ಮಹಿಳಾ ಪೇದೆ ಉಷಾ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...