Tuesday, October 1, 2024
Tuesday, October 1, 2024

Dhruva Narayana ಮೃದುಭಾಷಿ ಹಸನ್ಮುಖಿ ರಾಜಕಾರಣಿ ಧ್ರುವನಾರಾಯಣ ಅಸ್ತಂಗತ

Date:

Dhruva Narayana ಕೆಪಿಸಿಸಿ ಕಾರ್ಯಧ್ಯಕ್ಷ ಮಾಜಿ ಸಂಸದ ಧ್ರುವನಾರಾಯಣ ಅವರು ಹೃದಯಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ರಂಗಸ್ವಾಮಿ ಧ್ರುವನಾರಾಯಣ ಅವರು ಲೋಕಸಭೆಯ ಮಾಜಿ ಸಂಸದರು. ಭಾರತದ 15 ಮತ್ತು 16ನೇ ಲೋಕಸಭೆಯ ಸದಸ್ಯರಾಗಿದ್ದರು. ಕರ್ನಾಟಕದ ಚಾಮರಾಜನಗರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಇವರು ಮೂಲತಃ ಅವರು ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದವರು.

ಯಾವುದೇ ರೀತಿಯ ಆರೋಗ್ಯ ಸಮಸ್ಯೆ ದ್ರುವ ನಾರಾಯಣ ಅವರಿಗೆ ಇರಲಿಲ್ಲ. ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇವರ ಸಾವಿಗೆ ಅನೇಕ ಗಣ್ಯರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ನಗುಮುಖದ ಗೆಳೆಯ, ನಮ್ಮ ನಾಯಕ ಮತ್ತು ಕಾಂಗ್ರೆಸ್ನ ಅತ್ಯಂತ ಸಮರ್ಪಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಧ್ರುವನಾರಾಯಣ ಅವರ ನಿಧನ ಸರಿಪಡಿಸಲಾಗದಷ್ಟು ನಷ್ಟವನ್ನು ಮಾಡಿದೆ. ಇದನ್ನು ವಿವರಿಸಲು ಯಾವುದೇ ಪದಗಳಿಲ್ಲ ಎಂದು ಟ್ವೀಟ್ ಮಾಡುವ ಮುಖಾಂತರ ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು , ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್ ದ್ರುವ ನಾರಾಯಣ್ ಅವರ ಹಠ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿ ಪಾತ್ರರಾ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Dhruva Narayana ಧ್ರುವ ನಾರಾಯಣ ಅವರ ಸಾವಿಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಮಾಜಿ ಸಂಸದರು ಮತ್ತು ಕೆಪಿಸಿಸಿಯ ಕಾರ್ಯಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ ಅವರ ನಿಧನದ ವಿಷಯ ಅತ್ಯಂತ ಬೇಸರವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...