Saturday, December 6, 2025
Saturday, December 6, 2025

Chikmagalur ಚಿಕ್ಕಮಗಳೂರು ಬಸವನಹಳ್ಳಿಕೆರೆ ರಿಯಲ್ ಎಸ್ಟೇಟ್ ಸಂಸ್ಥೆಗೆ ವಹಿಸಬೇಡಿ

Date:

Chikmagalur  ಚಿಕ್ಕಮಗಳೂರು, ಜಿಲ್ಲೆಯ ಸೊಬಗನ್ನು ಹೆಚ್ಚಿಸುವ ಬಸವನಹಳ್ಳಿ ಕೆರೆಯನ್ನು ರಿಯಲ್ ಎಸ್ಟೇಟ್ ಮಾಡುವ ಉದ್ದೇಶದಿಂದ ಖಾಸಗೀ ಸಂಸ್ಥೆಗೆ ನೀಡಿ ಮೂಲಸೌಂದರ್ಯವನ್ನು ಹಾಳುಗೆಡವಲಾಗುತ್ತಿದೆ. ಈ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿ ಹೋರಾಟ ನಡೆಸಲು ಮುಂದಾಗಲಾಗಿದೆ ಎಂದು ವಕೀಲೆ ಟಿ.ಶ್ರೀದೇವಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೇ ಕೆರೆಯನ್ನು ಬೆಂಗಳೂರು ಮಾದರಿಯ ಪ್ರಾಪರ್ಟಿ ಡೆವರ‍್ಸ್ಗಳಿಗೆ ಹಸ್ತಾಂತರ ಮಾಡಲಾಗಿದೆ. ಕೆರೆಯ ನ್ನು ಪುನರುಜ್ಜೀವನ ಮಾಡಹುದೇ ಹೊರತು ಡೆವಲಪ್ ಮಾಡಲು ಅವಕಾಶವಿಲ್ಲ. ಕೆರೆಕಟ್ಟೆಗಳನ್ನು ಅವುಗಳ ಪಾಡಿಗೆ ಬಿಡುವುದು ಸೂಕ್ತ ಎಂದು ಹೇಳಿದ್ದಾರೆ.

ಇಂದಿನ ಬಿರು ಬೇಸಿಗೆಯಲ್ಲಿ ನೀರಿನ ಮೂಲವನ್ನೇ ಮುಚ್ಚುತ್ತಿರುವುದನ್ನು ಎಲ್ಲರು ಪ್ರಶ್ನಿಸಬೇಕು. ಕೆರೆ, ಕಾಡು, ಹಾಗೂ ನದಿಗಳನ್ನು ಅಭಿವೃದ್ದಿಪಡಿಸುವುದು ಹೇಗೆ ಎಂದು ಜಿಲ್ಲಾಡಳಿತ ವಿವರಿಸಬೇಕು. ಕೆರೆಯ ಮೂಲ ಸ್ವರೂಪ ವನ್ನು ಉಳಿಸಿಕೊಂಡು ಹೋಗುವುದೇ ಅಭಿವೃದ್ದಿ. ಈಗಾಗಲೇ ಕೋಟೆಕೆರೆ ಅವನತಿಯತ್ತ ಸಾಗಿದ್ದು ಅದೇ ರೀತಿ ಯಲ್ಲಿ ಬಸವನಹಳ್ಳಿಕೆರೆಯನ್ನು ಅವನತಿಯತ್ತ ತೂಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದೆ ರಾಜರು ಮತ್ತು ಬ್ರಿಟಿಷ್ ಆಡಳಿತದಲ್ಲಿಯೂ ಕೆರೆಕುಂಟೆಗಳ ನಿರ್ವಹಣೆ ಬಿಗಿಯಾಗಿರುತ್ತಿತ್ತು. ಹಾಗೂ ಜಲಮೂಲಗಳಿಗೆ ಅತ್ಯಂತ ಪ್ರಾಮುಖ್ಯತೆಯನ್ನು ನೀಡುತ್ತಿದ್ದರು. ಆದರೆ ಇಂದು ಭಾರತೀಯ ಸಂಸ್ಕೃತಿಯ ಹರಿಕಾರರು ಎಂದು ಹೇಳಿಕೊಳ್ಳುವವರು ಕೋಟೆಕೆರೆ, ಅಯ್ಯನಕೆರೆ ಸೇರಿದಂತೆ ಇದೀಗ ಬಸವನಹಳ್ಳಿ ಕೆರೆಯನ್ನು ನುಂಗಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

Chikmagalur ಬಸವನಹಳ್ಳಿ ಕೆರೆಯ ಮೂಲ ಸ್ವರೂಪವನ್ನೇ ಈಗಾಗಲೇ ಅರ್ಧ ಬದಲಾಯಿಸಲಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದರೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿರುವುದನ್ನು ಗಮನಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಮೂಲಕ ಕೆರೆಯ ಅನವತಿಯನ್ನು ತಡೆಯುವಂತೆ ಹಾಗೂ ಮುಚ್ಚದಂತೆ ದಾವಾ ದಾಖಲಿಸಲಾಗಿದೆ ಎಂದಿದ್ದಾರೆ.

ಕೆರೆಯ ವಿಚಾರದಲ್ಲಿ ಮುಂದಾದರೂ ಜಿಲ್ಲೆಯ ಜನತೆ ಸಹಕಾರ ನೀಡಿ ಕೆರೆ ಉಳಿಸುವ ಪ್ರಯತ್ನಕ್ಕೆ ಕೈಜೋಡಿ ಸುವುದು ಸೂಕ್ತ ಹಾಗೂ ಮುಂದಿನ ದಿನಗಳಲ್ಲಿ ನ್ಯಾಯಯುತ ಹೋರಾಟಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...