Sunday, December 7, 2025
Sunday, December 7, 2025

UAHS ಶಿವಮೊಗ್ಗ ನವುಲೆಯಲ್ಲಿ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನ

Date:

UAHS  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ, ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಪಶು ವೈದ್ಯಕೀಯ ಕಾಲೇಜು, ಕರ್ನಾಟಕ ಪಶು ವೈದ್ಯಕೀಯ ಸಂಘ, ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ಮಾ.17 ರಂದು ಬೆಳಗ್ಗೆ 9:30ಕ್ಕೆ ಶಿವಮೊಗ್ಗದ ನವುಲೆ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.

UAHS  ಈ ಪ್ರದರ್ಶನದಲ್ಲಿ ಭಾಗವಹಿಸಲು ಒಂದು ವರ್ಷ ವಯಸ್ಸಿಗಿಂತ ಮೇಲ್ಪಟ್ಟ ಶ್ವಾನಗಳಿಗೆ ಮಾತ್ರ ಪ್ರವೇಶ ಇರುತ್ತದೆ. ಗರ್ಭಿಣ ಮತ್ತು ಈಸ್ಟಸ್‌ನಲ್ಲಿರುವ ಶ್ವಾನಗಳಿಗೆ ಪ್ರವೇಶವಿಲ್ಲ. ಸ್ಪರ್ಧೆಗೆ ಪ್ರತಿ ತಳಿ ವಿಭಾಗದಲ್ಲಿ ಕನಿಷ್ಠ 5 ತಳಿವಾರು ಶ್ವಾನಗಳಿದ್ದಲ್ಲಿ ಮಾತ್ರ ಸ್ಪರ್ಧೆಗೆ ಅವಕಾಶ ನೀಡಲಾಗುವುದು. ಭಾಗವಹಿಸುವ ಎಲ್ಲಾ ಶ್ವಾನಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯು ತಳಿವಾರು ನಡೆಯಲಿದ್ದು, ಪ್ರತಿ ತಳಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಪ್ರತಿ ತಳಿ ವಿಭಾಗದಲ್ಲಿ ಪ್ರಥಮ ಸ್ಪರ್ಧಿಗಳಿಗೆ ಕೊನೆಯಲ್ಲಿ ಚಾಂಪಿಯನ್ ಶ್ವಾನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಸ್ಪರ್ಧೆಯಲ್ಲಿ ಯಾವುದೇ ಕೌಶಲ್ಯ ಹಾಗೂ ಚಾಕಚಕ್ಯತೆಯ ಪ್ರದರ್ಶನಕ್ಕೆ ಅವಕಾಶವಿಲ್ಲ ಹಾಗೂ ಪರಿಗಣಿಸುವುದಿಲ್ಲ. ಆಯೋಜಕ/ತೀರ್ಪುಗಾರರ ನಿರ್ಣಯವೇ ಅಂತಿಮವಾಗಿರುತ್ತದೆ.

ಪ್ರUAHS ಶಿವಮೊಗ್ಗ ನವುಲೆಯಲ್ಲಿ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನಯ ವ್ಯವಸ್ಥೆ ಮಾಡಲಾಗಿರುತ್ತದೆ. ಯಾವುದೇ ರೋಗಗ್ರಸ್ಥ ಶ್ವಾನಗಳ ಪ್ರವೇಶ ನಿರ್ಬಂಧಿಸಲಾಗುವುದು.

ಸ್ಪರ್ಧೆಗೆ ನೋಂದಾಯಿಸಿಕೊಳ್ಳು ಮಾ.17 ಕೊನೆಯ ದಿನವಾಗಿದ್ದು, ನೋಂದಣಿ ಶುಲ್ಕ 100 ರೂ.ಆಗಿರುತ್ತದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣ ಸಂಖ್ಯೆ 9844014063/ 9448318878/9343464008/ 9449585021/ 9986339515/ 9611948135/ 6362432686 ಗಳನ್ನು ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ: ಅಂತಿಮವಾಗಿ ಚಾಂಪಿಯನ್ ಶ್ವಾನ ಸ್ಪರ್ಧೆಯಲ್ಲಿ ಗೆದ್ದ ಶ್ವಾನಗಳಿಗೆ 1ನೇ, 2ನೇ, ಹಾಗೂ 3ನೇ ಸ್ಥಾನಕ್ಕೆ ನಗದು ಬಹುಮಾನ ನೀಡಲಾಗುವುದು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...