Wednesday, October 2, 2024
Wednesday, October 2, 2024

Klive Special Article ಮನಸ್ಸಿನಿಂದ ಮನಸ್ಸಿಗೆ-20

Date:

Klive Special Article ನಾನೊಂದು ಮೀನು…….

ಸಾಗರವೇ ನಮ್ಮ ಮನೆ……

ನಮಗೆ ನಿಮ್ಮಂತೆ ಪ್ರಕೃತಿಯನ್ನು ಘಾಸಿಗೊಳಿಸಿ ಕಟ್ಟಿದ ಕಟ್ಟಡಗಳಿಲ್ಲ,

ವಿಶಾಲ ಸಮುದ್ರದಲ್ಲಿ ಬೃಹತ್ ಜಲಚರ ಕುಟುಂಬದ ಜೊತೆ ವಾಸ,

ನಿಮ್ಮಂತೆ ನಮಗೆ ಹಲವು ಭಾಷೆಗಳಿಲ್ಲ, ಇರುವುದೊಂದೇ ಭಾಷೆ,

ಜಾತಿ ಧರ್ಮಗಳು ನಮಗೆ ಗೊತ್ತೇ ಇಲ್ಲ,

ನಿಮ್ಮಂತೆ ಯಾವ ಕಾನೂನುಗಳು ನಮ್ಮನ್ನು ಕಟ್ಟಿಹಾಕಿಲ್ಲ, ಸ್ವತಂತ್ರರು ನಾವು,

ಕಳ್ಳರಲ್ಲ ನಾವು, ಅದಕ್ಕೆ ನಮಗೆ ಪೋಲೀಸರೇ ಇಲ್ಲ,

ನಮಗೆ ನಾವೇ ರಾಜರು,
ನಮ್ಮನ್ನಾಳುವ ಯಾವ ಪುಢಾರಿಗಳು ಇಲ್ಲ,

ನಿಮ್ಮಂತೆ ನಮಗೆ ವಾಚು, ಕ್ಯಾಲೆಂಡರ್ ಗಳಿಲ್ಲ,

ಹುಟ್ಟಿದಾಗಿನಿಂದ ಉಸಿರು ನಿಲ್ಲುವವರೆಗೂ ಜೀವಿಸಿರುವುದೇ ನಮ್ಮ ಬದುಕು,

ನಮ್ಮಲ್ಲಿ ಡಾಕ್ಟರ್ ಗಳಿಲ್ಲ,
ಆಕ್ಟರ್ ಗಳಿಲ್ಲ, ಇ೦ಜಿನಿಯರ್ ಗಳು, ಸಾಪ್ಟ್ ವೇರ್ ಗಳೂ ಇಲ್ಲ,

ಪೂಜಾರಿಗಳ ಮಂತ್ರಗಳಿಲ್ಲ, ಜ್ಯೋತಿಷಿಗಳ ತಂತ್ರಗಳಿಲ್ಲ,
ಪ್ರಾದ್ರಿಗಳ ಪ್ರಾರ್ಥನೆಗಳಿಲ್ಲ.
ಮೌಲ್ವಿಗಳ ನಮಾಜುಗಳಿಲ್ಲ,

Klive Special Article ಬುದ್ಧಿಜೀವಿಗಳೂ ಇಲ್ಲ,
ಲದ್ದಿ ಜೀವಿಗಳು ಇಲ್ಲ,

ದೇಶಭಕ್ತರೂ ಇಲ್ಲ,
ದೇಶದ್ರೋಹಿಗಳೂ ಇಲ್ಲ,

ಚಳುವಳಿಗಳೂ ಇಲ್ಲ,
ಪ್ರದರ್ಶನಗಳೂ ಇಲ್ಲ,
ಸಮಾಜ ಸೇವಕರೂ ಇಲ್ಲ,

ತಲೆ ಒಡೆಯುವವರೂ ಇಲ್ಲ,
ತಲೆ ಹಿಡಿಯುವವರೂ ಇಲ್ಲ,
ಬೆನ್ನಿಗೆ ಚೂರಿ ಹಾಕುವವರೂ ಇಲ್ಲ,
ಹೃದಯಕ್ಕೆ ಘಾಸಿಗೊಳಿಸುವವರೂ ಇಲ್ಲ,

ಬ್ಯಾಂಕ್‌ ಅಕೌಂಟುಗಳೂ ಇಲ್ಲ,
ಕಪ್ಪು ಹಣವು ಇಲ್ಲವೇ ಇಲ್ಲ,

ಚಿಕನ್ ಕಬಾಬ್ ಗಳಿಲ್ಲ,
ಹೋಳಿಗೆ ತುಪ್ಪಗಳೂ ಇಲ್ಲ,

ಅರಿಶಿನ ಕುಂಕುಮಗಳಿಲ್ಲ,
ಕಾಯಿ ಕರ್ಪೂರಗಳು ಗೊತ್ತೇ ಇಲ್ಲ,

ಮದುವೆಗಳಿಲ್ಲ,
ಡೈವೋರ್ಸ ಗಳೂ ತಿಳಿದಿಲ್ಲ,

ಜೀನ್ಸ್ ಪ್ಯಾಂಟುಗಳಿಲ್ಲ,
ಮಿಡಿ ಚೂಡಿದಾರ್ ಗಳೂ ಇಲ್ಲ,
ಬ್ಯೂಟಿ ಪಾರ್ಲರಗಳೂ ಇಲ್ಲ,
ಯೋಗ ಧ್ಯಾನ ಸೆಂಟರ್‌ ಗಳೂ ಇಲ್ಲ,

ಅಶ್ಲೀಲವೂ ಇಲ್ಲ,
ಸೌಂದರ್ಯವೂ ಇಲ್ಲ,
ಸ್ವಚ್ಛಂದ ಬದುಕು, ನಿಷ್ಕಲ್ಮಶ ಸಂತಾನ,

ಕಷ್ಟಗಳೂ, ಅಪಾಯಗಳು ನಮಗೂ ಇವೆ, ಆದರೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ,

ಕ್ಷಮಿಸಿ,
ನಾವು ನಿಮ್ಮಂತೆ ನಾಗರಿಕ ಮನುಷ್ಯರಲ್ಲ ಅನಾಗರಿಕ ಜಲಚರಗಳು,

ಆದರೂ ನಿಮ್ಮಲ್ಲೇ ಕೆಲವರು ನನಗೆ ಮಾತನಾಡುತ್ತಿದ್ದುದು ಕೇಳಿಸಿತು,

ಮನುಷ್ಯರಿಗಿಂತ ಪ್ರಾಣಿಗಳೇ ಗುಣದಲಿ ಮೇಲು,
ನಿಜವೇ ?……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ,

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...