Thursday, March 19, 2026
Thursday, March 19, 2026

Rippanpete Warrior Sandeep ಕರ್ತವ್ಯ ನಿರ್ವಹಣೆಯಲ್ಲೇ ಗುಂಡು ತಗುಲಿ ಪ್ರಾಣ ಬಿಟ್ಟ ರಿಪ್ಪನ್ ಪೇಟೆಯ ಯೋಧ ಸಂದೀಪ್

Date:

Rippanpete Warrior Sandeep ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಿಪ್ಪನಪೇಟೆಯ ಶಬರೀಶ ನಗರದ ಯೋಧ ಸಂದೀಪ್ ಅವರು ಈಶಾನ್ಯ ರಾಜ್ಯ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನಪ್ಪಿದ್ದಾರೆ.

ಸಂದೀಪ್ ಅವರು ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಳೆದೆರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇವರು ರಿಪ್ಪನಪೇಟೆಯ ಶ್ರೀಮತಿ ವಿನೋದಮ್ಮ, ಹಿರಿಯಣ್ಣ ಅವರ ಮಗನಾಗಿದ್ದರು.

ಸಂದೀಪ್ ಅವರು ಮಾರ್ಚ್ 20 ಬೆಳಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗುಂಡುಹಾರಿ ಸಾವನ್ನಪ್ಪಿದ್ದಾರೆ. ಇವರ ಸಾವಿನ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ ಪೇಟೆಯ ಸ್ಥಳೀಯರು ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಇವರು ಕರ್ತವ್ಯದಲ್ಲಿ ಇದ್ದಾಗ ಗುಂಡು ತಗಲಿ ಮೃತಪಟ್ಟಿದ್ದಾರೆ ಎಂದು ಮಿಲಿಟರಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

Rippanpete Warrior Sandeep ಸಾಗರ ಶಾಸಕರಾದ ಹರತಾಳು ಹಾಲಪ್ಪ ಅವರು ಯೋಧ ಸಂದೀಪ್ ಅವರ ಸಾವಿನ ಸುದ್ದಿ ತಿಳಿದು ಸಂತಾಪ ಸೂಚಿಸಿದ್ದಾರೆ.
ಭಾರತೀಯ ಸೇನೆಯ, ಅಸ್ಸಾಂ ರೈಫಲ್ಸ್ ನಲ್ಲಿ (ಮಣಿಪುರ) ಸೇವೆ ಸಲ್ಲಿಸುತ್ತಿದ್ದ, ರಿಪ್ಪನಪೇಟೆ, ಶಬರೀಶ ನಗರದ ಸಂದೀಪ್ ರವರು ಮೃತ ಪಟ್ಟಿರುವ ವಿಷಯ ಅತೀವ ನೋವುಂಟು ಮಾಡಿದೆ.

ಭಗವಂತ ಮೃತರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕರುಣಿಸಿ, ಕುಟುಂಬಸ್ಥರು ಹಾಗೂ ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...