Sunday, April 20, 2025
Sunday, April 20, 2025

Assembly Election ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಸಚಿವ ಮಹದೇವಪ್ಪ ಸ್ಪರ್ಧಿಸಲು ಒತ್ತಾಯ

Date:

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್‍ನ ಹಿರಿಯ ನಾಯಕರು, ಮಾಜಿ ಸಚಿವರೂ ಆದ ಹೆಚ್.ಸಿ. ಮಹದೇವಪ್ಪ ಅವರು ಸ್ಪರ್ಧಿಸುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಬಿ. ಜಗದೀಶ್ ಹಾಗೂ ಕಿಸಾನ್ ಕಾಂಗ್ರೆಸ್‍ನ ಜಿಲ್ಲಾ ಕಾರ್ಯಾಧ್ಯಕ್ಷ ಎಸ್. ಗಿರೀಶ್, ಮುಖಂಡರಾದ ಶಶಿಧರ್ ಒತ್ತಾಯಿಸಿದ್ದಾರೆ.

Assembly Election ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೆಚ್.ಸಿ. ಮಹದೇವಪ್ಪ ಅವರು ಹಲವಾರು ಬಾರಿ ವಿವಿಧ ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಲೋಕೋಪಯೋಗಿ ಸಚಿವರಾಗಿದ್ದಾಗ ನಡೆಸಿದ ರಸ್ತೆ ಅಭಿವೃದ್ಧಿ ಕಾರ್ಯಗಳು ಐತಿಹಾಸಿಕ ದಾಖಲೆಯಾಗಿ ಉಳಿದಿವೆ. ಆರೋಗ್ಯ ಸಚಿವರಾಗಿಯೂ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ.

Assembly Election 2023ರ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಬೇಕಿದ್ದ ಇವರು, ಕಾಂಗ್ರೆಸ್‍ನ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ನಂಜನಗೂಡು ಕ್ಷೇತ್ರವನ್ನು ಧ್ರುವನಾರಾಯಣ್ ಅವರ ಪುತ್ರನಿಗೆ ಬಿಟ್ಟುಕೊಟ್ಟು ಆದರ್ಶ ಮೆರೆದಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಹೆಚ್.ಸಿ. ಮಹದೇವಪ್ಪ ಅವರು ಸ್ಪರ್ಧಿಸಿದಲ್ಲಿ ದಾಖಲೆಯ ಗೆಲುವು ಸಾಧಿಸಲಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಲಿದೆ. ಆದ್ದರಿಂದ ಹೆಚ್.ಸಿ.ಮಹದೇವಪ್ಪ ಅವರು ಇಲ್ಲಿ ಸ್ಪರ್ಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...