Friday, September 27, 2024
Friday, September 27, 2024

JDS Party State President Appointed in Chikkamagalur ಮುಸ್ಲೀಂ ಸಮಾಜದವರನ್ನ ಮೇಲೆತ್ತುವ ಉದ್ದೇಶದಿಂದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ

Date:

JDS Party State President Appointed in Chikkamagalur ಮುಸ್ಲೀಂ ಸಮಾಜದವರನ್ನ ಮೇಲೆತ್ತುವ ಉದ್ದೇಶದಿಂದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮಾಜವನ್ನು ಮೇಲೆತ್ತುವ ಮಹತ್ತರ ಜವಾಬ್ದಾರಿ ಜೆಡಿಎಸ್‌ನಲ್ಲಿ ಮಾತ್ರ ಇರುವುದರಿಂದ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಹುದ್ದೆಯನ್ನು ನೀಡಿ ಗೌರವಿಸಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷ ಝಕರಿಯಾ ಝಾಕಿರ್ ಹೇಳಿದರು.

ಚಿಕ್ಕಮಗಳೂರು ನಗರದ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಪಕ್ಷವನ್ನು ತೊರೆದು ಸುಮಾರು 30 ಮಂದಿ ಜೆಡಿಎಸ್‌ಗೆ ಸೇರ್ಪಡೆಗೊಳಿಸಿಕೊಂಡು ಮಾತನಾಡಿದ ಅವರು ಕಳೆದ 75 ವರ್ಷಗಳಿಂದ ರಾಷ್ಟ್ರೀಯ ಪಕ್ಷಗಳು ಮುಸ್ಲಿಂ ಸಮಾಜವನ್ನು ಕತ್ತಲೆಯಲಿಟ್ಟಿತ್ತು. ಅವರುಗಳನ್ನು ಜೆಡಿಎಸ್ ಬೆಳಕಿಗೆ ತರುವ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.

JDS Party State President Appointed in Chikkamagalur ಮುಸ್ಲೀಂ ಸಮಾಜದವರನ್ನ ಮೇಲೆತ್ತುವ ಉದ್ದೇಶದಿಂದ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ರಾಜ್ಯದಲ್ಲಿ ಗ್ಯಾರೇಜ್, ಹಣ್ಣಿನ ವ್ಯಾಪಾರ, ಮೆಕಾನಿಕ್ ಸೇರಿದಂತೆ ಸಣ್ಣಪುಟ್ಟ ಕೆಲಸದಲ್ಲಿ ಮುಸ್ಲೀಂ ಸಮಾಜದ ಯುವಕರು ತೊಡಗಿಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಜನಾಂಗವು ಆರ್ಥಿಕವಾಗಿ, ರಾಜಕೀಯ ವಾಗಿ ಸದೃಢರಾಗಲು ಪ್ರತಿಯೊಬ್ಬರು ಪಣ ತೊಡಬೇಕು. ಆಗ ಮಾತ್ರ ಸಮಾಜದಲ್ಲಿ ಮುಂಚೂಣಿಗೆ ಬರಲು ಸಾಧ್ಯ ವಾಗಲಿದೆ ಎಂದು ತಿಳಿಸಿದರು.

ಬಿಜೆಪಿ ನೇತೃತ್ವದ ಸರ್ಕಾರಗಳು ಮುಸ್ಲಿಂ ಸಮಾಜವನ್ನು ಶೋಷಿಸುತ್ತಿದೆ. ಹಲಾಲ್‌ಕಟ್ ಒಂದೆಡೆಯಾದರೆ, ಹಿಜಾಬ್‌ನಿಂದಾಗಿ ಅನೇಕ ಬಾಲಕಿಯರು ಶಾಲೆಯ ಮುಂಭಾಗದಲ್ಲಿ ಕಣ್ಣಿರು ಹಾಕಿರುವುದು ನಮ್ಮ ಮುಂದಿದೆ. ಜನಾಂಗಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ಕೇವಲ ವೋಟ್‌ಬ್ಯಾಂಕ್‌ಗಾಗಿ ಮಾತ್ರ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ಸಮುದಾಯ ಅಭಿವೃದ್ದಿ ಕಿಂಚಿತ್ತು ಗಮನಹರಿಸುತ್ತಿಲ್ಲ ಎಂದು ಹೇಳಿದರು.

ಈ ಎರಡು ರಾಷ್ಟ್ರೀಯ ಪಕ್ಷಗಳಿಂದ ಅನೇಕ ಅಮಾಯಕ ಮುಸ್ಲಿಂ ಯುವಕರು ಹತರಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದಿರುವ ಬಿಜೆಪಿಯಾಗಲೀ ಅಥವಾ ಕಾಂಗ್ರೆಸ್ ಪಕ್ಷವಾಗಲೀ ಹತರಾದ ಕುಟುಂಬಕ್ಕೆ ಸಾಂತ್ವಾನ ಹೇಳದೇ ರಾಜಕೀಯ ದೊಂಬರಾಟವಾಡುತ್ತಿದೆ. ಆದರೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಆ ಕುಟುಂಬಕ್ಕೆ ಭೇಟಿ ನೀಡಿ ಧನಸಹಾಯ ಮಾಡುವ ಮೂಲಕ ಸಾಂತ್ವಾನ ಹೇಳಿದೆೆ ಎಂದರು.

ಪ್ರಸ್ತುತ ಜಿಲ್ಲೆಯ ಮುಸ್ಲೀಂ ಬಾಂಧವರು ಎರಡು ರಾಷ್ಟ್ರೀಯ ಪಕ್ಷಗಳನ್ನು ತ್ಯಜಿಸಿ ಜೆಡಿಎಸ್‌ನತ್ತ ಒಲವು ಹೊಂದುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದು ಬಡವರು, ದೀನದಲಿತರು ಹಾಗೂ ಅಲ್ಪಸಂಖ್ಯಾತರಿಗೆ ಸಹಾಯಹಸ್ತ ಚಾಚಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಎಸ್ಸಿಎಸ್ಟಿ ಘಟಕದ ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಮಾತನಾಡಿ, ದೇಶದಲ್ಲಿ ಮುಸ್ಲಿಂ ಹಾಗೂ ದಲಿತರು ಒಂದಾದರೆ ರಾಜಕೀಯ ಭವಿಷ್ಯವನ್ನೇ ಬದಲಿಸಬಹುದು.

ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕೈಜೋಡಿಸಬೇಕು. ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದು ತಿಳಿಸಿದರು.

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷ ಸೈಯದ್ ಅಭಿದಿನ್ ಮಾತನಾಡಿ ಕ್ಷೇತ್ರದಲ್ಲಿ ಸಮುದಾಯವು ಒಗ್ಗಟ್ಟಿನಿಂದ ಜೆಡಿಎಸ್ ಮತ ನೀಡಿದರೆ ಕ್ಷೇತ್ರ ಹಾಗೂ ಸಮುದಾಯ ಪೂರ್ಣಪ್ರಮಾಣದಲ್ಲಿ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ನಗರ ಮಹಾಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ಅಲ್ಪಸಂಖ್ಯಾತರ ಘಟಕದ ನಗರ ಪ್ರಧಾನ ಕಾರ್ಯದರ್ಶಿ ಸಮೀರ್ ಖಾನ್, ಕಚೇರಿ ಕಾರ್ಯದರ್ಶಿ ಆನಂದೇಗೌಡ ಮತ್ತಿತರರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...