Sunday, June 22, 2025
Sunday, June 22, 2025

Sri Charukeerthi Bhattarak Swamiji ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸ್ತಂಗತ

Date:

Sri Charukeerthi Bhattarak Swamiji  ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಅಸ್ತಂಗತರಾಗಿದ್ದಾರೆ.

ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.

ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಆರೋಗ್ಯದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿತ್ತು. ಮಾರ್ಚ್ 24ರಂದು ಭಂಡಾರ ಭವನದಲ್ಲಿ ಬೆಳಿಗ್ಗೆ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಏರುಪೇರಿನಿಂದಾಗಿ ಅಸ್ವಸ್ಥಗೊಂಡು ಸ್ವಾಮೀಜಿಗಳು ಕುಸಿದು ಬಿದ್ದಿದ್ದರು. ಕೂಡಲೇ ಮಠಕ್ಕೆ ವೈದ್ಯರನ್ನ ಕರೆಸಿ ಚಿಕಿತ್ಸೆ ನೀಡಲಾಯಿತು. ನಂತರ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸ್ವಾಮೀಜಿಗಳು ದೈವಾಧೀನರಾದರು.

Sri Charukeerthi Bhattarak Swamiji  ಜಿ ನೈಕ್ಯರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮ ಯೋಗಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯಗಳಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಸ್ವಾಮೀಜಿಗಳ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಅಪಾರ ಭಕ್ತ ಮುಂದಕ್ಕೆ ದುಃಖವನ್ನು ಬರಿಸುವ ಶಕ್ತಿ ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...