Wednesday, June 25, 2025
Wednesday, June 25, 2025

Protest against Rahul Gandhi’s Disqualification as MP ಮುಸ್ಲೀಂ ಸಮುದಾಯದ ಶೇ 4 ಮೀಸಲಾತಿ ರದ್ದು ಮತ್ತು ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ವಿರುದ್ಧ ಪ್ರತಿಭಟನೆ

Date:

Protest against Rahul Gandhi’s Disqualification as MP ರಾಹುಲ್‌ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹ ಗೊಳಿಸಿರುವುದು ಹಾಗೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯವನ್ನು ಆರ್ಥಿಕ ದುರ್ಬಲ ವರ್ಗಕ್ಕೆ ಸೇರಿಸಿ, ಶೇ. 4 ಮೀಸಲಾತಿ ಕಸಿದುಕೊಂಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಿಸಾನ್ ಸೆಲ್ ಘಟಕದ ವತಿ ಯಿಂದ ನಗರದ ಹನುಮಂತಪ್ಪ ವೃತ್ತದಲ್ಲಿ ಪಂಜಿನ ಮೂಲಕ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಲೋಕಸಭೆಯಲ್ಲಿ ರಾಹುಲ್‌ಅವರು ಇಲ್ಲದಿದ್ದರೆ ನಮಗೆ ನಷ್ಟ. ನಮಗೆ ಅವರು ಬೇಕು. ಅವರನ್ನು ಅನರ್ಹಗೊಳಿಸಿರುವುದು ಸರಿಯೇ ಎಂದು ಪ್ರಶ್ನಿಸಿದರು.
ರಾಜ್ಯದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಕೇವಲ ಮುಸ್ಲಿಂ ಮೀಸಲಾತಿಯನ್ನು ಕಸಿದುಕೊಂಡು ಕೀಳುಮಟ್ಟದ ರಾಜಕೀಯ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

Protest against Rahul Gandhi’s Disqualification as MP ಮುಖಂಡ ಕೆ.ಮಹಮದ್ ಮಾತನಾಡಿ ಅಲ್ಪಸಂಖ್ಯಾತರಿಗೆ ಶೇ.4 ಮೀಸಲಾತಿ ರದ್ದುಗೊಳಿಸಲು ಸಂಪುಟ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಮತ ಬ್ಯಾಂಕ್‌ಗಾಗಿ ಬಿಜೆಪಿ ಸರ್ಕಾರ ಈ ರೀತಿ ಮಾಡಿ ದಡ್ಡತನ ಪ್ರದರ್ಶಿ ಸಿದೆ ಎಂದು ದೂರಿದರು. ಸಮುದಾಯದವರನ್ನು ಕೆರಳಿಸುವಂತಹ ಕೆಲಸಕ್ಕೆ ಕೈಹಾಕಬಾರದು. ನಮ್ಮ ಹಕ್ಕು ಪಡೆದುಕೊಳ್ಳಲು ನಾವು ಹೋರಾಟ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಿಸಾನ್ ಅಧ್ಯಕ್ಷ ರಸೂಲ್‌ಖಾನ್, ಮುಖಂಡರುಗಳಾದ ಅತೀಕ್ ಖೈಸರ್, ನೂರ್ ಅಹ್ಮದ್, ಜಂಶೀದ್, ಜೋಹರ್ ಫೈಲ್ವಾನ್, ಶಹಬುದ್ದೀನ್, ನಜೀರ್ ಅಹ್ಮದ್, ಇರ್ಫಾನ್ ಮತ್ತಿತರರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...