Tuesday, April 22, 2025
Tuesday, April 22, 2025

Farmers protest ವಿದ್ಯುಚ್ಛಕ್ತಿ ಕ್ಷೇತ್ರ ಖಾಸಗೀಕರಣ ಪ್ರಸ್ತಾವ ವಿರೋಧಿಸಿ ರೈತರ ಪ್ರತಿಭಟನೆ

Date:

Farmers protest  ವಿದ್ಯುಚ್ಚಕ್ತಿ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ರೈತ ಸಂಘದ ಮುಖಂಡರುಗಳು ನಗರದ ಮೆಸ್ಕಾಂ ಇಲಾಖೆ ಕಚೇರಿಯ ಸಮೀಪ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ವಿದ್ಯುಚ್ಚಕ್ತಿ ಖಾಸಗೀಕರಣ ದಿಂದ ರೈತರ ಬದುಕಿಗೆ ಮಾರಕವಾಗಲಿದೆ. ಜೊತೆಗೆ ಬಳಕೆದಾರರಿಗೆ ಇದರಿಂದ ತೊಂದರೆಯಾಗಲಿರುವ ಹಿನ್ನೆಲೆ ಯಲ್ಲಿ ಈ ಖಾಸಗೀಕರಣವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ವಿದ್ಯುಚ್ಚಕ್ತಿ ಬಳಕೆ ಮಾಡುವ ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ಮೀಟರ್ ಅಳವಡಿಸಲು ಕ್ರಮ ಕೈಗೊಂಡಿರು ವುದನ್ನು ಕೈಬಿಡಬೇಕು. ಹಗಲು ಹೊತ್ತು 12 ಗಂಟೆ ನಿರಂತರವಾಗಿ ತ್ರಿಪೇಸ್ ವಿದ್ಯುತನ್ನು ಕೃಷಿಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಬೇಕು, ಪರಿವರ್ತಕಗಳು ಕೆಟ್ಟು ಹೋದ ಸಂದರ್ಭದಲ್ಲಿ ೭೨ ಗಂಟೆಯೊಳಗೆ ಪರಿವರ್ತಕ ಅಳವಡಿಸಬೇಕು ಎಂದು ಆಗ್ರಹಿಸಿದರು.

ನೀರಾವರಿ ಪಂಪ್‌ಸೆಟ್‌ಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಿದ ರೈತರಿಗೆ 15 ದಿನಗಳಲ್ಲಿ ಸಂಪರ್ಕ ಕಲ್ಪಿಸಬೇಕು. ಅಕ್ರಮ ಸಕ್ರಮದಡಿ ಹಣ ಪಾವತಿಸಿರುವ ರೈತರಿಗೆ ತಕ್ಷಣ ಪರಿವರ್ತಕ ಅಳವಡಿಸಬೇಕು. ಲೈನ್‌ಮ್ಯಾನ್‌ಗಳು ದೂರು ಸ್ವೀಕರಿಸಿದ ನಂತರ ಸೂಕ್ತ ಸಮಯದಲ್ಲಿ ಲೈನ್‌ಟ್ರಬಲ್ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

Farmers protest  ವಿತರಣಾ ಮಾರ್ಗದ ನ್ಯೂನ್ಯತೆಯಿಂದಾಗುವ ರೈತರ ಪ್ರಾಣಹಾನಿಗೆ ಗರಿಷ್ಟ ಮಟ್ಟದ ಪರಿಹಾರ ಕೊಡಬೇಕು ಹಾಗೂ ಕೆಟ್ಟು ಹೋದ ಪರಿವರ್ತಕಗಳನ್ನು 72 ಗಂಟೆಯೊಳಗೆ ಅಳವಡಿಸಿ ಬೆಳೆ ನಷ್ಟವಾದರೆ ವೈಜ್ಞಾನಿಕ ಪರಿಹಾರ ಕೊಡಬೇಕು ಎಂದು ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಾರುತಿ ಅವರಿಗೆ ಮುಖಂಡರುಗಳು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಮಹೇಶ್, ಮುಖಂಡರುಗಳಾದ ಕೆ.ಕೆ.ಕೃಷ್ಣೇ ಗೌಡ, ಬಸವರಾಜ್, ಕೆ.ಸಿ.ಆನಂದ್, ವಿಜಯ್‌ಕುಮಾರ್, ಕೆಂಬಾಲಯ್ಯ, ಅಶೋಕ್ ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...