Sunday, August 23, 2026
Sunday, August 23, 2026

Sweda Women’s Organization ಆತ್ಮವಿಶ್ವಾಸದಿಂದ ಮಹಿಳೆ ಮುನ್ನಡೆದರೆ ಉದ್ಯಮದಲ್ಲಿ ಯಶಸ್ವಿ- ಎನ್.ಗೋಪಿನಾಥ್

Date:

Sweda Women’s Organization ಆತ್ಮವಿಶ್ವಾಸ ಹಾಗೂ ಶ್ರದ್ಧೆಯಿಂದ ಮುನ್ನಡೆದರೆ ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗುವ ಜತೆಯಲ್ಲಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬಹುದಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌.ಗೋಪಿನಾಥ್‌ ಅವರು ಹೇಳಿದರು.

ಶಿವಮೊಗ್ಗದ ಮಥುರಾ ಪಾರಾಡೈಸ್‌ ಸಭಾಂಗಣದಲ್ಲಿ ಸ್ವೇದ ಮಹಿಳಾ ಸಂಘಟನೆ ಮತ್ತು ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಶಿವಮೊಗ್ಗ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಕೌಶಲಾಭಿವೃದ್ಧಿ ಕಾರ್ಯಕ್ರಮ ಮತ್ತು ಕ್ಯಾನ್ಸರ್‌ ಉಚಿತ ತಪಾಸಣಾ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸ್ವೇದ ಮಹಿಳಾ ಸಂಸ್ಥೆಯು ಮಹಿಳೆಯರಿಗೆ ಕೌಶಲ್ಯಯುತ ತರಬೇತಿ ನೀಡುವ ಜೊತೆಯಲ್ಲಿ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮಹಿಳೆಯರು ಮನೆಗಳಲ್ಲಿ ತಯಾರಿಸುವ ಆಹಾರ, ತಿನಿಸು, ಕರಕುಶಲ ವಸ್ತುಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಕೆಲಸ ಮಾಡುತ್ತಿದೆ. ಮಹಿಳೆಯರು ಸರ್ಕಾರದ ಆರ್ಥಿಕ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ರೆಡ್‌ ಕ್ರಾಸ್‌ ಸಂಸ್ಥೆಯು ತುರ್ತು ಸಂದರ್ಭಗಳಲ್ಲಿ ಅಪಾರ ಸೇವೇಗಳನ್ನು ಸಲ್ಲಿಸುವ ಕಾರ್ಯ ನಡೆಸುತ್ತಿದೆ. ದೇಶಾದ್ಯಂತ ಲಕ್ಷಾಂತರ ಜನರ ಸೇವೆಯಿಂದ ಹೆಚ್ಚು ಜನರಿಗೆ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದರು.

ಸ್ವೇದ ಮಹಿಳಾ ಸಂಘಟನೆ ಅಧ್ಯಕ್ಷೆ ಲಕ್ಷ್ಮೀದೇವಿ ಗೋಪಿನಾಥ್‌ ಮಾತನಾಡಿ, ಮಹಿಳೆಯರು ಸಬಲೀಕರಣಗೊಳ್ಳಲು ಮತ್ತು ಉದ್ಯಮಶೀಲತೆ ಮಾದರಿ ಮೂಲಕ ಸಂಪೂರ್ಣ ಸಾಮಾರ್ಥ್ಯ ಅರಿತುಕೊಳ್ಳಲು ವೇದಿಕೆ ಒದಗಿಸುವ ಕೆಲಸವನ್ನು ಸ್ವೇದ ಸಂಘಟನೆ ಮಾಡುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ, ಸ್ವಂತ ಸಾಮಾರ್ಥ್ಯದಿಂದ ದುಡಿದು ಜೀವನ ರೂಪಿಸಿಕೊಳ್ಳಲು ಆಸಕ್ತಿ ಇರುವ ಮಹಿಳೆಯರಿಗೆ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.

ಸ್ವೇದ ಮಹಿಳಾ ಸಂಘಟನೆ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್‌ ಮಾತನಾಡಿ, ಸ್ವಸಹಾಯ ಗುಂಪುಗಳಲ್ಲಿ ತಯಾರಿಸುವ ವಸ್ತುಗಳಿಗೆ ಮಾರುಕಟ್ಟೆ ಕಲ್ಪಿಸುವ ವೇದಿಕೆಯಾಗಿ ಸ್ವೇದ ಕಾರ್ಯ ನಿರ್ವಹಿಸುತ್ತಿದೆ. ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಹೆಚ್ಚು ಹೆಚ್ಚು ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

Sweda Women’s Organization ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ‌, ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಶಿವಮೊಗ್ಗ ಜಿಲ್ಲಾ ಘಟಕದ ಅಜೀವ ಸದಸ್ಯ ಜಿ.ವಿಜಯ್‌ಕುಮಾರ್‌ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಂಗಳೂರಿನ ಮಹಾದೇವ್‌ ಅವರು ವಿಶೇಷ ಉಪನ್ಯಾಸ ನೀಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ, ಕೌಶಲ್ಯಾಭಿವೃದ್ಧಿ ಚೇರ್ಮನ್ ಗಣೇಶ್‌ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...