Thursday, March 19, 2026
Thursday, March 19, 2026

Shivamogga DC Office ವಾಹನಗಳಲ್ಲಿ ಧ್ವನಿವರ್ಧಕ ಬಳಕೆ ಮತ್ತು ಸಾರ್ವಜನಿಕವಾಗಿ ಪಟಾಕಿ ಸಿಡಿಸಲು ಜಿಲ್ಲಾಡಳಿತದ ಪರವಾನಗಿ ಪಡೆಯಬೇಕು

Date:

Shivamogga DC Office ಸಕ್ಷಮ ಪ್ರಾಧಿಕಾರದಿಂದ ಲಿಖಿತ ಅನುಮತಿ ಪಡೆಯದೆ ಸ್ಥಿರ ಅಥವಾ ಚಲಿಸುತ್ತಿರುವ ವಾಹನಗಳಿಗೆ ಅಳವಡಿಸಿರುವ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸಬಾರದು ಹಾಗೂ ಪಟಾಕಿಯನ್ನು ಸಿಡಿಸಬಾರದು. ಇದರ ಉಲ್ಲಂಘನೆ ಅಪರಾಧವಾಗಿದ್ದು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಸಭಾಂಗಣ, ಕಾನ್ಫರೆನ್ಸ್ ಕೊಠಡಿ, ಕಮ್ಯುನಿಟಿ ಸಭಾಂಗಣ ಅಥವಾ ಸಾರ್ವಜನಿಕ ತುರ್ತು ಹೊರತುಪಡಿಸಿ ರಾತ್ರಿ ವೇಳೆ ಧ್ವನಿವರ್ಧಕಗಳು, ಪಟಾಕಿಗಳು, ಶಬ್ದ ತರುವ ಸಾಧನಗಳು ಅಥವಾ ಸಂಗೀತ ಸಾಧನಗಳನ್ನು ಬಳಸುವಂತಿಲ್ಲ.

Shivamogga DC Office ಮೌನ ವಲಯ(ಸೈಲೆನ್ಸ್ ಝೋನ್) ಅಥವಾ ವಸತಿ ಪ್ರದೇಶಗಳಲ್ಲಿ ರಾತ್ರಿ ವೇಳೆ ವಾಹನಗಳ ಹಾರ್ನ್ ಶಬ್ದ ಮಾಡುವುದು ಅಥವಾ ಪಟಾಕಿ ಸಿಡಿಸುವುದು ಅಥವಾ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಮತದಾನ ಮುಕ್ತಾಯವಾಗುವ 48 ಗಂಟೆಗಳ ಹಿಂದೆ ಮತ್ತು ಮತ ಎಣಿಕೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳು/ಪೊಲೀಸ್ ಉಪಾಧೀಕ್ಷಕರ ಅನುಮತಿ ಇಲ್ಲದೆ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುಂತಿಲ್ಲ.

ಇದರ ಉಲ್ಲಂಘನೆ ಅಪರಾಧವಾಗಿದ್ದು, ಇದರಿಂದಾಗಿ ಯಾವುದೇ ರೀತಿಯ ಹಾನಿ, ತೊಂದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದಲ್ಲಿ ಕಾನೂನಿನ ರೀತ್ಯಾ ಕ್ರಮ ಜರುಗಿಸಲಾಗುವುದು. ಹಾಗೂ ಈ ಆದೇಶದ ಉಲ್ಲಂಘನೆಯಿಂದ ಯಾವುದೇ ವ್ಯಕ್ತಿ ಅಥವಾ ಮಾನವ ಜೀವನ, ಆರೋಗ್ಯ ಮತ್ತು ಸುರಕ್ಷತೆಗೆ ಹಾನಿ, ತೊಂದರೆ, ಅಡ್ಡಿ, ಗಾಯ ಉಂಟಾದಲ್ಲಿ ಅಥವಾ ಗಲಭೆ, ಗಲಾಟೆ ಉಂಟಾದಲ್ಲಿ ಐಪಿಸಿ ಸೆಕ್ಷನ್ 188 ರನ್ವಯ ಕ್ರಮ ಕೈಗೊಳ್ಳಲಾಗುವುದು.

ಈ ಆದೇಶವು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಇಡೀ ಜಿಲ್ಲೆಗೆ ಅನ್ವಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...