Monday, February 2, 2026
Monday, February 2, 2026

Balebare Ghat ತೀರ್ಥಹಳ್ಳಿ ಕುಂದಾಪುರ ನಡುವೆ ಬಾಳೆಬರೆ ಘಾಟ್ ಹೆದ್ದಾರಿ 52 ರಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚನೆ

Date:

Balebare Ghat ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ ಹತ್ತು ದಿವಸುಗಳ ಕಾಲ ವಿಸ್ತರಿಸಲಾಗಿದೆ.

Balebare Ghat ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...