Thursday, June 18, 2026
Thursday, June 18, 2026

Balebare Ghat ತೀರ್ಥಹಳ್ಳಿ ಕುಂದಾಪುರ ನಡುವೆ ಬಾಳೆಬರೆ ಘಾಟ್ ಹೆದ್ದಾರಿ 52 ರಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚನೆ

Date:

Balebare Ghat ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ ಹತ್ತು ದಿವಸುಗಳ ಕಾಲ ವಿಸ್ತರಿಸಲಾಗಿದೆ.

Balebare Ghat ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...