Monday, December 15, 2025
Monday, December 15, 2025

Hotel Owners Association karnataka ಮತ್ತೆ ಹೋಟೆಲ್ ತಿಂಡಿ ದರ ಏರಿಕೆ?

Date:

Hotel Owners Association karnataka ವಾಣಿಜ್ಯ ಬಳಕೆಯ ಅಡುಗೆ ಅನಿಲ, ಹಾಲು, ತುಪ್ಪ, ಬೆಣ್ಣೆ ಹಾಗೂ ಇತರೆ ಆಹಾರ ಪದಾರ್ಥಗಳ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತಿಂಡಿಗಳ ಬೆಲೆ ಹೆಚ್ಚಳ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ.

ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ ಕಳೆದ ತಿಂಗಳು 350 ರೂ. ಏರಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ದರ ಏರಿಕೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ದೋಸೆ, ಇಡ್ಲಿ ವಡೆ, ರೈಸ್ ಬಾತ್, ಕಾಫಿ ಟೀ, ದರವನ್ನು ಒಂದರಿಂದ ಎರಡು ರೂಪಾಯಿ ಏರಿಸಲು ಚಿಂತಿಸಲಾಗಿದೆ ಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಹಣಕಾಸು ವರ್ಷದ ಆರಂಭದಲ್ಲಿ ದರ ಹೆಚ್ಚಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಭೆ ನಡೆಸಲಾಗುವುದು. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಗಳಿಂದ ಹೋಟೆಲ್ ಉದ್ಯಮದ ಮೇಲೆ ಉಂಟಾಗುತ್ತಿರುವ ಲಾಭ ನಷ್ಟಗಳ ಬಗ್ಗೆ ಕುಲಂಕುಶವಾಗಿ ಚರ್ಚಿಸಲಾಗುವುದು. ದರ ಏರಿಕೆಯ ಅನಿವಾರ್ಯ ಕಂಡು ಬಂದರೆ ಹೆಚ್ಚಿಸಲಾಗುವುದು ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಪಿ. ಸಿ. ರಾವ್ ಅವರು ತಿಳಿಸಿದ್ದಾರೆ.

Hotel Owners Association karnataka ಹೋಟೆಲ್ ಗಳು ದರ ಹೆಚ್ಚಿಸಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಆತಂಕದ ಹಿನ್ನೆಲೆಯಲ್ಲಿ ಊಟ ತಿಂಡಿಯ ಪ್ರಮಾಣವನ್ನೇ ಕಡಿಮೆ ಮಾಡಿವೆ. ದೋಸೆ ಇಡ್ಲಿ ವಡೆ ಗಾತ್ರವನ್ನು ಕುಗ್ಗಿಸಲಾಗಿದೆ.

ಉಕ್ರೇನ್ ರಷ್ಯಾ ಯುದ್ಧದಿಂದಾಗಿ ಅಡುಗೆಗೆ ಬಳಕೆಯಾಗುವ ಖಾದ್ಯ ತೈಲ, ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ನ ಬೆಲೆ ಹೆಚ್ಚಳದಿಂದಾಗಿ ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ ಹೋಟೆಲ್ಗಳಲ್ಲಿ ಊಟ ತಿಂಡಿ ದರದಲ್ಲಿ ಶೇ. 10 ರಷ್ಟು ಏರಿಕೆ ಮಾಡಲಾಗಿತ್ತು.

ನಂತರ ಹಾಲಿನ ದರ, ಇನ್ನಿತರ ವಸ್ತುಗಳ ದರ ಏರಿಕೆ ನೆಪದಲ್ಲಿ ನವೆಂಬರ್ ಡಿಸೆಂಬರ್ ನಲ್ಲಿ ಮತ್ತೆ ದರ ಹೆಚ್ಚಿಸಲಾಗಿತ್ತು . ಈಗ ಮತ್ತೆ ಬೆಲೆ ಏರಿಸಲು ಉದ್ದೇಶಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...