Monday, May 4, 2026
Monday, May 4, 2026

Hotel Owners Association karnataka ಮತ್ತೆ ಹೋಟೆಲ್ ತಿಂಡಿ ದರ ಏರಿಕೆ?

Date:

Hotel Owners Association karnataka ವಾಣಿಜ್ಯ ಬಳಕೆಯ ಅಡುಗೆ ಅನಿಲ, ಹಾಲು, ತುಪ್ಪ, ಬೆಣ್ಣೆ ಹಾಗೂ ಇತರೆ ಆಹಾರ ಪದಾರ್ಥಗಳ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತಿಂಡಿಗಳ ಬೆಲೆ ಹೆಚ್ಚಳ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ.

ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ ಕಳೆದ ತಿಂಗಳು 350 ರೂ. ಏರಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ದರ ಏರಿಕೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ದೋಸೆ, ಇಡ್ಲಿ ವಡೆ, ರೈಸ್ ಬಾತ್, ಕಾಫಿ ಟೀ, ದರವನ್ನು ಒಂದರಿಂದ ಎರಡು ರೂಪಾಯಿ ಏರಿಸಲು ಚಿಂತಿಸಲಾಗಿದೆ ಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಹಣಕಾಸು ವರ್ಷದ ಆರಂಭದಲ್ಲಿ ದರ ಹೆಚ್ಚಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಭೆ ನಡೆಸಲಾಗುವುದು. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಗಳಿಂದ ಹೋಟೆಲ್ ಉದ್ಯಮದ ಮೇಲೆ ಉಂಟಾಗುತ್ತಿರುವ ಲಾಭ ನಷ್ಟಗಳ ಬಗ್ಗೆ ಕುಲಂಕುಶವಾಗಿ ಚರ್ಚಿಸಲಾಗುವುದು. ದರ ಏರಿಕೆಯ ಅನಿವಾರ್ಯ ಕಂಡು ಬಂದರೆ ಹೆಚ್ಚಿಸಲಾಗುವುದು ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಪಿ. ಸಿ. ರಾವ್ ಅವರು ತಿಳಿಸಿದ್ದಾರೆ.

Hotel Owners Association karnataka ಹೋಟೆಲ್ ಗಳು ದರ ಹೆಚ್ಚಿಸಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಆತಂಕದ ಹಿನ್ನೆಲೆಯಲ್ಲಿ ಊಟ ತಿಂಡಿಯ ಪ್ರಮಾಣವನ್ನೇ ಕಡಿಮೆ ಮಾಡಿವೆ. ದೋಸೆ ಇಡ್ಲಿ ವಡೆ ಗಾತ್ರವನ್ನು ಕುಗ್ಗಿಸಲಾಗಿದೆ.

ಉಕ್ರೇನ್ ರಷ್ಯಾ ಯುದ್ಧದಿಂದಾಗಿ ಅಡುಗೆಗೆ ಬಳಕೆಯಾಗುವ ಖಾದ್ಯ ತೈಲ, ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ನ ಬೆಲೆ ಹೆಚ್ಚಳದಿಂದಾಗಿ ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ ಹೋಟೆಲ್ಗಳಲ್ಲಿ ಊಟ ತಿಂಡಿ ದರದಲ್ಲಿ ಶೇ. 10 ರಷ್ಟು ಏರಿಕೆ ಮಾಡಲಾಗಿತ್ತು.

ನಂತರ ಹಾಲಿನ ದರ, ಇನ್ನಿತರ ವಸ್ತುಗಳ ದರ ಏರಿಕೆ ನೆಪದಲ್ಲಿ ನವೆಂಬರ್ ಡಿಸೆಂಬರ್ ನಲ್ಲಿ ಮತ್ತೆ ದರ ಹೆಚ್ಚಿಸಲಾಗಿತ್ತು . ಈಗ ಮತ್ತೆ ಬೆಲೆ ಏರಿಸಲು ಉದ್ದೇಶಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...