Sunday, December 14, 2025
Sunday, December 14, 2025

Ayanur Manjunath MLC ಆಯನೂರು ಮಂಜುನಾಥ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಈಶ್ವರಪ್ಪನವರ ವಿರುದ್ಧ ಗರಂಗರಂ

Date:

Ayanur Manjunath MLC ಆಯನೂರು ಮಂಜುನಾಥ್ ಅವರು ಪತ್ರಿಕಾಗೋಷ್ಠಿ ನಡೆಸಿ ಪ್ರಸ್ತುತ ವರ್ತಮಾನ ಪಕ್ಷ ರಾಜಕೀಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಶಿವಮೊಗ್ಗ
ಈ ಬಾರಿ ವಿಧಾನಸಭೆಗೆ ಕಣಕ್ಕಿಳಿಯಲೇಬೇಕು ಎಂಬ ಇಚ್ಚೆಯಿಂದ ಸಾರ್ವತ್ರಿಕವಾಗಿ ಹೇಳಿದ್ದೇನೆ.
ಪಕ್ಷದ ವೇದಿಕೆಯಲ್ಲಿಯೂ ನನ್ನ ವಿನಂತಿ ಮಾಡಿಕೊಂಡಿದ್ದೇನೆ.
ನನ್ನ ಪ್ರಯತ್ನಕ್ಕೆ ಪೂರಕವಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗಬಹುದು ಎಂಬ ಲಕ್ಷಣಗಳು ಕಂಡು ಬಂದಿಲ್ಲ.
ಆದರೆ ಕೆಲವರ ಮಕ್ಕಳ ಹೆಸರುಗಳು ಓಡಾಡುತ್ತಿವೆ.
ಮೊನ್ನೆ ಈಶ್ವರಪ್ಪ‌ ಹೇಳಿದ ಮಾತನ್ನು ಗಂಭೀರವಾಗಿ ಪರಿಗಣಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ.
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ ಎಂದರು.

Ayanur Manjunath MLC ಈಶ್ವರಪ್ಪ ಅವರ ಏಕವಚನ ಪ್ರಯೋಗ ಅವರ ಶಿಕ್ಷಣದ ಮಟ್ಟ ತೋರಿಸುತ್ತಿದೆ.
ಈಶ್ವರಪ್ಪ ನಾಲಿಗೆ ಮೇಲೆ‌ ಹಿಡಿತ ಇಲ್ಲ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ.
ನನಗೆ ಅವನದ್ಯಾವ ಲೆಕ್ಕ ಎಂದು ಹೇಳಿದ್ದನ್ನು ಸವಾಲಾಗಿ ಸ್ವೀಕರಿಸುತ್ತೇನೆ.
ಖಚಿತವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ.
ನನ್ನ ಬಗ್ಗೆ ಯಕಶ್ಚಿತ್ ಆಗಿ ಮಾತನಾಡಿದ ಪ್ರಭಾವಿ ಈಶ್ವರಪ್ಪ.
ಶಿವಮೊಗ್ಗ ಬಿಟ್ಟರೆ ಬೇರೆಲ್ಲೂ ಗೆಲ್ಲಲು ಆಗದ ಪ್ರಭಾವಿ‌ ನಾಯಕ ಈಶ್ವರಪ್ಪ ಎಂದು ಈಶ್ವರಪ್ಪನವರ ಕುರಿತು ಕಟುವಾಗಿ ನುಡಿದರು.

ಈಶ್ವರಪ್ಪ ಅಥವಾ ಅವರ ಮಗ ಚುನಾವಣೆಗೆ ಬರಲಿ ರಾಜಕೀಯದ ಲೆಕ್ಕಗಳನ್ನು ಕೊಡುತ್ತೇನೆ.
ಹಾಗೆಯೇ ಎಣಿಸಿಕೊಳ್ಳಲು‌ ಕೊಡುತ್ತೇನೆ. ನಿಮ್ಮ ಗೋಡೌನ್ ನಲ್ಲಿ ಇರುವ ಎಣಿಕೆ ಮೆಷಿನ್ ಗಳನ್ನು ತರಬೇಕಾಗುತ್ತೆ.
ನೀವು ಮತ್ತೆ ನಿಮ್ಮ ಮಗ ಚುನಾವಣೆಗೆ ಬರಲೇಬೇಕು.
ನಿರ್ಲಜ್ಜೆಯಿಂದ ಸಂಕೋಚ ಬಿಟ್ಟು ಈ ಬಾರಿ ತಮ್ಮ‌ ಮಗನಿಗೆ ಟಿಕೆಟ್ ಕೇಳಿದ್ದೀರಿ.
ನಿಮ್ಮನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದ ರುದ್ರೇಗೌಡರು, ಗಿರೀಶ್ ಪಟೇಲ್, ಸಿದ್ದರಾಮಣ್ಣ ಅವರಿಗೆ ಟಿಕೆಟ್ ಕೇಳಿಲ್ಲ
ನಿಮ್ಮ ಮಗನಿಗೆ ಟಿಕೆಟ್ ಕೇಳಿದ್ದೀರಿ, ಆತ ಒಳ್ಳೆಯ ತಳಿಯೇ ಎಂದು ವ್ಯಂಗ್ಯವಾಡಿದರು.

ಈಶ್ವರಪ್ಪ ಅವರಿಗೆ ಅಧಿಕಾರದ ಹಪಾಹಪಿ‌ ಇದೆ.
ಮಂತ್ರಿ ಸ್ಥಾನ ಕೊಡಲಿಲ್ಲ ಎಂದು ಅಧಿವೇಶನಕ್ಕೆ ಬರಲಿಲ್ಲ.
ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಲಿಲ್ಲ.
ಯಡಿಯೂರಪ್ಪ‌ ಸಿಎಂ ಆಗಿದ್ದಾಗ ಮಂತ್ರಿಯಾಗಿದ್ದ ಈಶ್ವರಪ್ಪ‌ ಒಂದು ದಿನವೂ ಹೆಲಿಪ್ಯಾಡ್ ಗೆ ಬಂದು ಸ್ವಾಗತಿಸಲಿಲ್ಲ.
ಯಡಿಯೂರಪ್ಪ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿಲ್ಲ.
ಯಡಿಯೂರಪ್ಪ ಮೇಲೆ ಆರೋಪ ಬಂದು ಜೈಲಿಗೆ ಹೋದಾಗ ಇಂತ ಸ್ಥಿತಿ ಬಂದರೆ‌ ನೇಣು ಹಾಕಿಕೊಳ್ಳುತ್ತೇನೆ ಎಂದಿದ್ದಿರಿ.
ನಿಮ್ಮ ಮೇಲೆ ಆರೋಪ‌ ಬಂದಾಗ ನೇಣು ಹಾಕಿಕೊಳ್ಳುವುದಿರಲಿ ನೇಣು ಹಗ್ಗವನ್ನು ತರಲಿಲ್ಲ.
ಬದಲಿಗೆ ಬೇರೆಯ ಹುಡುಗ ಆತ್ಮಹತ್ಯೆ ಮಾಡಿಕೊಂಡ.
ನನ್ನ 26 ವರ್ಷದ ರಾಜಕಾರಣದಲ್ಲಿ ಯಾವುದೇ ಕಳಂಕ ಬಂದಿಲ್ಲ.
ಈಶ್ವರಪ್ಪ ಅವರಿಗೆ ಇನ್ನು ಲೆಕ್ಕ ಕೊಡಲು ಆರಂಭಿಸುತ್ತೇನೆ.
ಲೆಕ್ಕ ಹಾಕಲು ನಿಮ್ಮ ಗೋಡಾನ್ ನಲ್ಲಿರುವ ಎಣಿಕೆ‌ ಮೆಷಿನ್ ಹೊರಗೆ ತೆಗೆಯಿರಿ.
ಒಂದು ವೇಳೆ ಎಣಿಕೆ‌ ಮೆಷಿನ್ ಸೀಜ್ ಆಗಿದ್ದರೆ ಹೊಸ ಮೆಷಿನ್ ಖರೀದಿಸಿ.
ಈಶ್ವರಪ್ಪ ಅವರ ಚುನಾವಣೆಯ ತಂತ್ರಗಳನ್ನು ಅರಿತಿದ್ದೇನೆ.
ಶಿವಮೊಗ್ಗದಲ್ಲಿ ಮೊನ್ನೆ ನಾಲ್ಕೂವರೆ ಕೋಟಿ ರೂಪಾಯಿ ಸೀರೆ ಸಿಕ್ಕಿಬಿದ್ದಿದೆ ಎಂದು ಆರೋಪಿಸಿದರು.

ಒಬ್ಬ 1.50 ಕೋಟಿ ಕೊಂಡೊಯ್ಯುವಾಗ ಸಿಕ್ಕಿಬಿದ್ದಿದ್ದಾನೆ.
ಈಶ್ವರಪ್ಪ‌ ಅವರ ಬಳಿ ಅಪಾರ ದುಡ್ಡಿದೆ.
ಚುನಾವಣೆಗಾಗಿ ವಾರ್ಡ್ ಗಳಲ್ಲಿ ಹಣ ಡಿಪಾಸಿಟ್ ಇಟ್ಟಿದ್ದೀರಿ ಎಂಬುದು ಗೊತ್ತಿದೆ.
ಈ ಬಾರಿ ನಿಮ್ಮ ಹಣ ಲೆಕ್ಕಕ್ಕೆ ಇಲ್ಲ ಎಂಬುದನ್ನು ತೋರಿಸುತ್ತೇನೆ.
ಶಿವಮೊಗ್ಗದಲ್ಲಿ ಆಗಿರುವ ಅಭಿವೃದ್ಧಿ ಈಶ್ವರಪ್ಪ ಮಾಡಿಲ್ಲ.‌ ಬದಲಿಗೆ ಅಭಿವೃದ್ಧಿ ಮಾಡಿರುವುದು ಯಡಿಯೂರಪ್ಪ ಹಾಗು ರಾಘವೇಂದ್ರ.
32 ವರ್ಷದ ಅಧಿಕಾರಾವಧಿಯಲ್ಲಿ ಈಶ್ವರಪ್ಪ ಮಾಡಿದ್ದು ಏನೂ ಇಲ್ಲ.
ಅಲ್ಲೊಂದು ಕಡೆ ಇಲ್ಲೊಂದು ಕಡೆ ಪ್ರಚೋದನಾತ್ಮಕ ಭಾಷಣ ಮಾಡಿ ಗಲಭೆ ಮಾಡಿಸಿ ಚುನಾವಣೆ ಮಾಡುತ್ತೀರಿ.
ಈ ಬಾರಿ ಅದು ನಡೆಯಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಈಶ್ವರಪ್ಪ ನೀಡಿದ ಸವಾಲು ಸ್ವೀಕರಿಸಿದ್ದೇನೆ. ನೀವು ನನ್ನ ಸವಾಲು ಸ್ವೀಕರಿಸುತ್ತೀರೋ ಇಲ್ಲವೋ ಪುಕ್ಕಲನಂತೆ ಹಿಂದೆ ಸರಿಯುತ್ತೀರೋ ಯೋಚನೆ ಮಾಡಿ.
ಸದ್ಯದಲ್ಲೇ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.
ನಿಮ್ಮ ಎಷ್ಟು ಸೀರೆ‌ಬಂಡಲ್‌, ಪಂಚೆ ಬಂಡಲ್ ಬರುತ್ತವೋ ಬರಲಿ.
ಊರಲ್ಲಿ ಸೊಳ್ಳೆ ಓಡಿಸಲು ಆಗದೆ ಸೊಳ್ಳೆ‌ ಪರದೆ ಹಂಚಿದ್ದ ಕೀರ್ತಿ ಈಶ್ವರಪ್ಪ ಅವರದ್ದು.
ಸೊಳ್ಳೆ ಓಡಿಸಲು ಔಷಧ ಹೊಡೆಸಬೇಕು ಅದನ್ನು ಬಿಟ್ಟು‌ ಸೊಳ್ಳೆ ಪರದೆ ಹಂಚಿದ ಏಕೈಕ ಶಾಸಕ ಈಶ್ವರಪ್ಪ.
ಈಶ್ವರಪ್ಪ ಅವರಿಗೆ ಏನು ಕೊಡಬೇಕು ಎಂಬುದು ಗೊತ್ತಿಲ್ಲ. ಆದರೆ ಏನು ಪಡೆಯಬೇಕು ಎಂಬುದು ಚನ್ನಾಗಿ ಗೊತ್ತು.
ದೇವಸ್ಥಾನ, ಪ್ರಾರ್ಥನಾ ಮಂದಿರ ಮಲಿನವಾಗಬಹುದು, ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಹೊರಟವರೇ ಮಲಿನ ಮಾಡುತ್ತಾರೆ.
ಹಿಂದು, ಮುಸ್ಲಿಮರು ಯಾರೋ ಸಂಯಮ ಕಳೆದುಕೊಳ್ಳಬಾರದು.
ಪೊಲೀಸರು ಮೈಮರೆಯಬಾರದು. ಚುನಾವಣೆ ವೇಳೆ ಒಂದೆರಡು ಘಟನೆಗಳು ನಡೆಯುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...