Congress Party Karnataka ಶಿವಮೊಗ್ಗದಲ್ಲಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಈಶ್ವರಪ್ಪ ಶಿವಮೊಗ್ಗ ನಗರದಲ್ಲಿ ಏನು ಕೆಲಸ ಮಾಡಿಲ್ಲ. ಯಡಿಯೂರಪ್ಪ ಅವರ ಪದಚ್ಯುತಿಗೆ ಕಾರಣರಾಗಿದ್ದಾರೆ.
ಈಶ್ವರಪ್ಪ ಅವರು ಹಿಂದಿನಿಂದಲೂ ಹಿಂದು ಮುಸ್ಲಿಂ ನಡುವೆ ಗಲಾಟೆ ಮಾಡಿಕೊಂಡು ಬಂದಿದ್ದಾರೆ ಎಂದರು.
ಕೆಲವು ಯುವಕರ ಬಲಿ ತೆಗೆದುಕೊಂಡಿದ್ದಾರೆ.
ಶಿವಮೊಗ್ಗ ನಗರದ ಶಾಂತಿ ಕದಡುವ ಕೆಲಸ ಕಾಣಿಸುತ್ತಿದೆ.
ಎಲ್ಲಾ ವಾರ್ಡ್ ಗಳಲ್ಲಿಯೂ ಕೋಟಿಗಟ್ಟಲೆ ಹಣ ಡಿಪಾಸಿಟ್ ಮಾಡಿದ್ದಾರೆ ಎಂದು ಆರೋಪಿಸಿದರು.
Congress Party Karnataka ಈ ಬಗ್ಗೆ ಆಯನೂರು ಮಂಜುನಾಥ್ ಅವರು ಮಾಧ್ಯಮದ ಮೂಲಕ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಡಿಸಿ, ಎಸ್ ಪಿ ಅವರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಅಧಿಕಾರಿಗಳು ತಂಡ ರಚನೆ ಮಾಡಿ ಶಿವಮೊಗ್ಗ ನಗರದ ಮನೆಗಳ ಪರಿಶೀಲನೆ ನಡೆಸಬೇಕು.
2018 ರ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯಿತು.
ಆ ಸಂದರ್ಭದಲ್ಲಿ ಅಧಿಕಾರಿಗಳು ಏನು ಮಾಡಲು ಸಾಧ್ಯವಾಗಲಿಲ್ಲ.ಆಯನೂರು ಮಂಜುನಾಥ್ ಅವರ ಆರೋಪವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.
ಜನತೆಯ ಶಾಂತಿ ಮುಖ್ಯ, ಪಾರದರ್ಶಕ ಚುನಾವಣೆ ನಡೆಸುವುದು ಮುಖ್ಯ ಎಂದರು.
ಆಯನೂರು ಮಂಜುನಾಥ್ ಪಕ್ಷಕ್ಕೆ ಸೇರ್ಪಡೆಯಾದರೆ ವೈಯಕ್ತಿಕವಾಗಿ ಸ್ವಾಗತ ಕೋರುತ್ತೇನೆ.ಪಕ್ಷದಲ್ಲಿ 11 ಜನ ಆಕಾಂಕ್ಷಿಗಳು ಅರ್ಜಿ ಹಾಕಿದ್ದೇವೆ.ಅರ್ಜಿ ಹಾಕಿರುವ 11ಜನರಲ್ಲೇ ಎಲ್ಲರೂ ಸಮರ್ಥರಿದ್ದಾರೆ ಎಂದು ತಿಳಿಸಿದರು.
ಅರ್ಜಿ ಹಾಕಿರುವವರಲ್ಲೇ ಯಾರಿಗಾದರೂ ಟಿಕೇಟ್ ನೀಡುವಂತೆ ನಾಯಕರಲ್ಲಿ ಮನವಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
