Artists of Shivamogga ಶಿವಮೊಗ್ಗ ಜಿಲ್ಲೆಯು ಕಲೆ, ಸಾಹಿತ್ಯ, ಸಾಂಸ್ಕೃತಿಕ ತವರೂರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆಯ ಕಲಾವಿದರು ಹೆಸರು ಮಾಡಿದ್ದಾರೆ. ಕಲಾವಿದರು ಸಾಂಸ್ಕೃತಿಕ ಆಸ್ತಿ ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ.ನಾಗರಾಜ್ ಹೇಳಿದರು.
ಗೋಪಾಳದ ಚಂದನ ಆರೋಗ್ಯ ಉದ್ಯಾನವನದಲ್ಲಿ ಫ್ರೆಂಡ್ಸ್ ಸೆಂಟರ್ ಹಾಗೂ ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ವತಿಯಿಂದ ಸದಸ್ಯರಿಗೆ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಹಾಗೂ ಬೆಳದಿಂಗಳ ಭೋಜನಕೂಟದಲ್ಲಿ ಮಾತನಾಡಿದರು.
ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸುವುದರಿಂದ ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಲು ಸಾಧ್ಯ ಆಗಲಿದೆ. ದೊಡ್ಡ ದೊಡ್ಡ ಕಲಾವಿದರನ್ನು ಗೌರವಿಸುವುದರಿಂದ ಯುವ ಪ್ರತಿಭೆಗಳಿಗೆ ಪ್ರೇರಣೆ ಸಿಗುತ್ತದೆ. ಜಿಲ್ಲೆಯ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
Artists of Shivamogga ಇದೇ ಸಂದರ್ಭದಲ್ಲಿ ಕಾರ್ಯದರ್ಶಿ ಆರ್.ಎಸ್.ಗೋಪಾಲಕೃಷ್ಣ ಮಾತನಾಡಿ, ಫ್ರೆಂಡ್ಸ್ ಸೆಂಟರ್ ಶಿವಮೊಗ್ಗ ನಗರದಲ್ಲಿ 50 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದೆ. ಶಿವಮೊಗ್ಗ ನಗರದ ಗಣ್ಯರು ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸೇವಾ ಕ್ಷೇತ್ರದಲ್ಲಿ ಮಹತ್ತರ ಕೆಲಸಗಳನ್ನು ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಭದ್ರಾವತಿಯ ಆಕಾಶವಾಣಿ, ದೂರದರ್ಶನ ಕಲಾವಿದ ವಸಂತ ಮಾಧವ ಅವರನ್ನು ಸನ್ಮಾನಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನೂತನ ಸದಸ್ಯರಿಗೆ ಅಭಿನಂದಿಸಲಾಯಿತು.
ಉದ್ಯಾನವನದ ಉಸ್ತುವಾರಿ ಅಧ್ಯಕ್ಷ ಜಯಕುಮಾರ್ ಮಾತನಾಡಿದರು.
ಫ್ರೆಂಡ್ಸ್ ಸೆಂಟರ್ ಸದಸ್ಯರಿಂದ ಮನೋರಂಜನೆ, ಆಕಾಶವಾಣಿ, ದೂರದರ್ಶನ ಕಲಾವಿದ ವಸಂತ ಮಾಧವ, ಕಲಾವಿದ ಜಿ.ವಿಜಯ್ಕುಮಾರ್ ಅವರಿಂದ ಹಳೇ ಚಿತ್ರಗೀತೆಗಳ ಗಾಯನ, ಭಕ್ತಿ ಗೀತೆ ಹಾಗೂ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.
ಪ್ರಮುಖರಾದ ಎಸ್.ದತ್ತಾತ್ರಿ, ಲೋಕೇಶ್, ಮೋಹನ್, ಜಿ.ಸತ್ಯನಾರಾಯಣ, ಮಹಿಳಾ ವಿಭಾಗದ ಅಧ್ಯಕ್ಷೆ ಲತಾ ರಮೇಶ್, ಪದಾಧಿಕಾರಿಗಳು, ಸದಸ್ಯರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
