Monday, December 15, 2025
Monday, December 15, 2025

Adi Chunchanagiri Mutt ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯ ವಾರ್ಷಿಕೋತ್ಸವ

Date:

Adi Chunchanagiri Mutt ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯ ವಾರ್ಷಿಕೋತ್ಸವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಠದ ಆದಿಚುಂಚನಗಿರಿ ಸಮುದಾಯಭವನ ಹಾಗೂ ಕಾಲಬೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿಗಳವರ ಕೃಪಾಶೀರ್ವಾದಗಳೊಂದಿಗೆ,
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

Adi Chunchanagiri Mutt ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯ ವಾರ್ಷಿಕೋತ್ಸವ ಇಲ್ಲಿನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ, ಆದಿಚುಂಚನಗಿರಿ ಸಮುದಾಯ ಭವನದ ರಜತ ಮಹೋತ್ಸವ, ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ, ಬಿಜಿಎಸ್ ದತ್ತಿನಿದಿ ಹಾಗೂ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವು ಏಪ್ರಿಲ್ 06 ಮತ್ತು 07 ರಂದು ಎರಡು ದಿನಗಳ ಕಾಲ ನಗರದ ಶರಾವತಿ ನಗರದ ಬಡಾವಣೆಯಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದೆ.

ಏಪ್ರಿಲ್ 06 ರಂದು ಬೆಳಿಗ್ಗೆ 5:30 ರಿಂದ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸ್ವಾಮಿಗೆ ಹೋಮ ಹವನಾದಿಗಳೊಂದಿಗೆ ಕುಂಭಾಭಿಷೇಕ, ಮಹಾಮಂಗಳಾರತಿ ವಿಶೇಷ ಪೂಜಾ ಕೈಂಕರ್ಯಗಳೊAದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ನಂತರ ಬೆಳಿಗ್ಗೆ 08 ಗಂಟೆಗೆ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಸಹ ಇದೇ ಸ್ಥಳದಲ್ಲಿ ನಡೆಯಲಿದೆ.
ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬೆಳಿಗ್ಗೆ 10:30ಕ್ಕೆ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಅಂದು ಸಂಜೆ 6:30 ರಿಂದ ಸಾಹಿತ್ಯ ಹುಣ್ಣಿಮೆ ಹಾಗೂ ಬಿಜಿಎಸ್ ದತ್ತಿ ನಿಧಿ ಹಾಗೂ ಸಾಹಿತ್ಯ ಹುಣ್ಣಿಮೆ ಮತ್ತು ಇತರೆ ಕಾರ್ಯಕ್ರಮಗಳು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದೆ.

ಏಪ್ರಿಲ್ 07 ರಂದು ಬೆಳಿಗ್ಗೆ 8:00 ಗಂಟೆಗೆ ಚಿಣ್ಣರ ಬೇಸಿಗೆ ಶಿಬಿರವನ್ನು ಪೂಜ್ಯರು ಉದ್ಘಾಟಿಸಲಿದ್ದು ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಾಗೂ ಶರಾವತಿ ನಗರದ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಬಿರವನ್ನ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸಾನ ಶಾಖಾ ಮಠದ ಪೂಜ್ಯರು ಈ ಎಲ್ಲಾ ಕಾರ್ಯಕ್ರಮದಲ್ಲಿ ನಗರದ ನಾಗರಿಕರು ಹಾಗೂ ಪೋಷಕ ಬಂಧುಗಳು ಹಾಗೂ ಶ್ರೀ ಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಎರಡು ದಿನಗಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...