Tuesday, August 25, 2026
Tuesday, August 25, 2026

Innerwheel Shivamogga ಭಾರತೀಯ ಸೈನಿಕರನ್ನ ಗೌರವಿಸುವುದು ನಮ್ಮ ಕರ್ತವ್ಯ- ಮಧುರಾ ಮಹೇಶ್

Date:

Innerwheel Shivamogga ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದವರನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್ ಹೇಳಿದರು.

ಶಿವಮೊಗ್ಗದ ಕೃಷಿನಗರದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಜನರು ನೆಮ್ಮದಿಯ ಜೀವನ ನಡೆಸಲು ದೇಶದ ಸೇನೆಯು ಮುಖ್ಯ ಕಾರಣ. ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಹಗಲಿರುಳು ದೇಶವನ್ನು ಕಾಯುವ ಸೈನಿಕರ ಕಾರ್ಯ ಶ್ರೇಷ್ಠ ಎಂದು ತಿಳಿಸಿದರು.

ಇಪ್ಪತ್ತು ವರ್ಷಗಳಿಂದ ಭಾರತೀಯ ವಾಯು ಸೇನೆಯಲ್ಲಿ ಅಸ್ಸಾಂ, ದೆಹಲಿ, ಬೆಂಗಳೂರು, ಆಗ್ರಾ ಸೇರಿದಂತೆ ವಿವಿಧೆಡೆಗಳಲ್ಲಿ ಸೇವೆ ಸಲ್ಲಿಸಿದ ಸೇನಾ ಅಧಿಕಾರಿ ಮಹಾಬಲೇಶ್ವರ ಹೆಗಡೆ ಅವರಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಹಾಬಲೇಶ್ವರ ಹೆಗಡೆ, ಇಪ್ಪತ್ತು ವರ್ಷಗಳ ಕಾಲ ಭಾರತೀಯ ವಾಯುಸೇನೆಯಲ್ಲಿ ಸೇವೆ ಮಾಡುವ ಅವಕಾಶ ಸಿಕ್ಕಿತು. ಜ್ಯೂನಿಯರ್ ವಾರೆಂಟ್ ಆಫಿಸರ್ ಆಗಿ ಕೆಲಸ ಮಾಡಿದೆ. ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಪುಣ್ಯ ನನ್ನದಾಗಿತ್ತು ಎಂದು ತಿಳಿಸಿದರು.

Innerwheel Shivamogga ಕೃಷಿನಗರದ ಎಲ್‌ಬಿಎಸ್ ನಗರದಲ್ಲಿ ಉಚಿತವಾಗಿ ಯೋಗ ಶಿಕ್ಷಣ ನೀಡುತ್ತಿರುವ ಚಂದ್ರಶೇಖರ್ ಹಾಗೂ ನಾಗರತ್ನಮ್ಮ ಅವರಿಗೆ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಯೋಗ ಕುರಿತು ತಿಳವಳಿಕೆ ಮೂಡಿಸಲಾಯತು.

ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್, ಸಹ ಕಾರ್ಯದರ್ಶಿ ಆಶಾ ಶ್ರೀಕಾಂತ್, ನಿರ್ಮಲಾ ಮಹೇಂದ್ರ, ವೀಣಾ ಸುರೇಶ್, ರಾಜೇಶ್ವರಿ ಪ್ರತಾಪ್, ವೀಣಾ ಹರ್ಷ, ವಾಣಿ ಪ್ರವೀಣ್, ಜಯಂತಿ ವಾಲಿ, ವಿಜಯ ರಾಯ್ಕರ್, ನಮಿತಾ ಸೂರ್ಯನಾರಾಯಣ, ವಿಜಯ ಶಶಿಧರ್, ಸುಮಾ ರವಿ, ಜ್ಯೋತಿ ಸುಬ್ಬೇಗೌಡ, ವೇದಾ ನಾಗರಾಜ, ಶಿಲ್ಪಾ ಗೋಪಿನಾಥ್, ಲತಾ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...