Friday, December 5, 2025
Friday, December 5, 2025

Adichunchanagiri Mutt ಯಾವುದೇ ಆಮಿಷಕ್ಕೊಳಗಾಗದೇ ಮತ ಚಲಾಯಿಸಿ -ಶ್ರೀಪ್ರಸನ್ನನಾಥ ಸ್ವಾಮೀಜಿ

Date:

Adichunchanagiri Mutt ಯಾವುದೇ ಆಮಿಷಗಳಿಗೆ ಬಲಿಯಾಗದೆ ಮತದಾನವನ್ನು ಉತ್ತಮ ವ್ಯಕ್ತಿಗೆ ಮಾಡಿ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಶಿವಮೊಗ್ಗ ಪರಿವಾರ ಸಂಸ್ಥೆ ರೋಟರಿ ಹಾಲ್ ನಲ್ಲಿ ನಡೆಸಿದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ಇಂದಿನ ದಿನಗಳಲ್ಲಿ ಪಟ್ಟಣ ಪ್ರದೇಶದಲ್ಲಿ ಹೆಚ್ಚಾಗಿರುವುದು ದುರಂತದ ವಿಷಯ. ಶಿವಮೊಗ್ಗ ಜಿಲ್ಲೆಯನ್ನು ಒಂದು ಕುಟುಂಬದ ರೀತಿ ಕಟ್ಟಿಕೊಡುವ ಉದ್ದೇಶದಿಂದ ಶಿವಮೊಗ್ಗ ಪರಿವಾರ ಸಂಸ್ಥೆ ಇಂತಹ ಕಾರ್ಯಕ್ರಮಗಳಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು.

Adichunchanagiri Mutt ಶಿವಮೊಗ್ಗ ಪರಿವಾರ ಸಂಸ್ಥೆಯ ಅಧ್ಯಕ್ಷ ಕೆ. ಎಸ್. ಶಶಿ ಅವರು ಅಧ್ಯಕ್ಷತೆ ವಹಿಸಿದ್ದರು. ಓಂ ಗಣೇಶ್ ಟ್ರಾಕ್ಟರ್ಸ್ ಮಾಲೀಕ ಹರ್ಷ ಕಾಮತ್ ಹಾಗೂ ಪರಿವಾರದ ಕಾರ್ಯಾಧ್ಯಕ್ಷ ಡಾ. ಅಮಿತಾ ಹೆಗಡೆ ಉಪಸ್ಥಿತರಿದ್ದರು.
ಇನ್ನೂರಕ್ಕೂ ಹೆಚ್ಚು ಸದಸ್ಯರು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಮತದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ಶಿಕ್ಷಕ ಜಗದೀಶ್ ವಂದಿಸಿದರು. ಪೃತ್ವಿ ಗೌಡ ಅವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...