Saturday, December 6, 2025
Saturday, December 6, 2025

Actor Sudeep ನಟ ಸುದೀಪ್ ಬಿಜೆಪಿ ಪ್ರಚಾರಕರಾದ್ದರಿಂದ ಅವರ ಸಿನಿಮಾ ಟೀವಿ ಪ್ರದರ್ಶನಗಳಿಗೆ ತಾತ್ಕಾಲಿಕ ತಡೆಕೊಡಲು ಮನವಿ

Date:

Actor Sudeep ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದಾರೆ.

ಈ ವಿಚಾರವಾಗಿ ಸಮಾಜದ ವಿವಿಧ ವರ್ಗಗಳ ಜನರಿಂದ ವಿವಿಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಶಿವಮೊಗ್ಗ ಮೂಲದ ಅಡ್ವೊಕೇಟ್ ಕೆ.ಪಿ. ಶ್ರೀಪಾಲ ಅವರು

ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಎಂದು ತಿಳಿದುಬಂದಿದೆ.

Actor Sudeep ನಟ ಸುದೀಪ್ ಅವರ ಟಿ ವಿ ಶೋಗಳು, ಚಿತ್ರಗಳು, ಜಾಹೀರಾತುಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರಸಾರ ಮಾಡಬಾರದು.ಸುದೀಪ್ ಅವರ ಟಿವಿ ಶೋಗಳು, ಚಿತ್ರಗಳನ್ನು ಪ್ರಸಾರ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಪ್ರಸಾರ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಪ್ರಸಾರಕ್ಕೆ ತಡೆಯೊಡ್ಡಬೇಕೆಂದು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...