Sunday, December 7, 2025
Sunday, December 7, 2025

Supreme Court ತನಿಖಾ ಸಂಸ್ಥೆಗಳ ದುರ್ಬಳಕೆ ವಿಚಾರಣೆ ನಡೆಸಲು ಸುಪ್ರೀಮ್ ನಕಾರ

Date:

Supreme Court ತನ್ನ ರಾಜಕೀಯ ವಿರೋಧಿಗಳನ್ನ ಹಣಿಯಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೇರಿದಂತೆ ಒಟ್ಟು 14 ವಿರೋಧ ಪಕ್ಷಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Supreme Court ಯಾರೋ ನೊಂದ ವ್ಯಕ್ತಿ ಸಲ್ಲಿಸಿರುವ ಅರ್ಜಿ ಇದಲ್ಲ. ಇದು ರಾಜಕೀಯ ಪಕ್ಷಗಳು ಕೂಡಿರುವ ದಾವೆ. ಕೆಲ ಅಂಕಿ ಅಂಶಗಳು ಲಭ್ಯ ಇದ್ದ ಮಾತ್ರಕ್ಕೆ ಅವುಗಳ ಆಧಾರದ ಮೇಲೆ ತನಿಖೆ ನಿಲ್ಲಿಸಿ ಎಂದು ಹೇಳಲು ಆಗುತ್ತದೆಯೇ? ರಾಜಕೀಯ ನಾಯಕರು ಈ ದೇಶದ ನಾಗರಿಕರಲ್ಲವೇ. ನಾಗರಿಕರಾಗಿರುವ ನಾವೆಲ್ಲರೂ ಕಾನೂನಿಗೆ ಬದ್ಧರಾಗಿರಬೇಕಲ್ಲವೇ? ಎಂದು ನ್ಯಾಯ ಪೀಠವು ವಿಪಕ್ಷಗಳ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪ್ರಶ್ನಿಸಿತು.

ಕಾನೂನಿನ ಎದುರು ಎಲ್ಲರೂ ಸಮಾನರು. ರಾಜಕಾರಣಿಗಳಿಗೆ ಸಾಮಾನ್ಯ ನಾಗರಿಕರಿಗಿಂತಲೂ ಹೆಚ್ಚಿನ ರಕ್ಷಣೆ ನೀಡಲಾಗದು. ಅಮೂರ್ತ ರೀತಿಯಲ್ಲಿ ಮಾರ್ಗ ಸೂಚಿಗಳನ್ನು ಪ್ರಕಟಿಸುವುದು ಅಪಾಯಕಾರಿ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಹಾಗೂ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಅಭಿಪ್ರಾಯ ಪಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...