Sunday, December 14, 2025
Sunday, December 14, 2025

IMA Shivamogga ಎಲ್ಲರೂ ದಿನಚರಿಯಲ್ಲಿ ದೈಹಿಕ ಚಟುವಟಿಕೆಗೆ ಸಮಯ ನೀಡಿ-ಜಿ.ಕೆ. ಮಿಥುನ್ ಕುಮಾರ್

Date:

IMA Shivamogga ಏಪ್ರಿಲ್ 6, 2023 ರಂದು ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆಯಿಂದ ಸೈಕಲ್ ಜಾಥಾ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯರೂ ಪಾಲ್ಗೊಂಡಿದ್ದರು . ಐಎಂಎ ಹಾಲ್ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಎಸ್ಪಿ ಮಿಥುನಕುಮಾರ್ ಅವರು ಹಸಿರು ಭಾವುಟದಿಂದ ಸೈಕಲ್ ಜಾಥಾಗೆ ಚಾಲನೆ ನೀಡುತ್ತಾ ಉದ್ಘಾಟಿಸಿದರು.

ಬದಲಾದ ಜೀವನಶೈಲಿಯ ಪ್ರಭಾವದಿಂದ ಇಂದಿನ ದಿನಗಳಲ್ಲಿ ಆರೋಗ್ಯ ಹದಗೆಡುತ್ತಿದೆ . ಅದಕ್ಕೋಸ್ಕರ ಎಲ್ಲ ವಯಸ್ಸಿನವರೂ ಸೇರಿ ತಮ್ಮ ದಿನಚರಿಯಲ್ಲಿ ದೈಹಿಕ ಚಟುವಟಿಕೆಗೆ ಸಮಯ ಕಲ್ಪಿಸಿಕೊಂಡು ನಿರಂತರವಾಗಿ ಅದನ್ನು ಪಾಲಿಸ ಬೇಕು . ವ್ಯಾಯಾಮ ಉತ್ತಮ ಆರೋಗ್ಯಕ್ಕೆ ರಹದಾರಿ ಎಂಬ ಮುಖ್ಯವಾದ ಸಂದೇಶವನ್ನು ಕೊಟ್ಟರು.

IMA Shivamogga ಐಎಂಎ ಅಧ್ಯಕ್ಷರಾದ ಡಾ . ಅರುಣ್.ಎಂ.ಎಸ್ ಅವರು ಜಾಗತಿಕವಾಗಿ ಆಚರಿಸಲ್ಪಡುವ ವಿಶ್ವ ಆರೋಗ್ಯ ದಿನಾಚರಣೆ ಜನರಲ್ಲಿ ಉತ್ತಮ ಆರೋಗ್ಯಕ್ಕಾಗಿ ಪಾಲಿಸಬೇಕಾದ ಸೂತ್ರಗಳ ಬಗ್ಗೆ ಜಾಗೃತಗೊಳಿಸಲು ಅವಕಾಶ ಕಲ್ಪಿಸುತ್ತದೆ. ಆರೋಗ್ಯವು ಜೀವನದ ಮೂಲತತ್ವ, ಅದು ಇಲ್ಲದೆ ಎಲ್ಲವೂ ನಿಷ್ಪ್ರಯೋಜಕ ಎಂದು ನುಡಿದರು . ಸೈಕಲ್ ಜಾಥಾ ಆರೋಗ್ಯ ಘೋಷಣೆಗಳೊಂದಿಗೆ ನಗರದ ಜೈಲ್ ಸರ್ಕಲ್ ,ಲಕ್ಷ್ಮಿ ಚಿತ್ರಮಂದಿರ , ಉಷಾ ನರ್ಸಿಂಗ್ ಹೋಂ , ಸವಳಂಗ ರಸ್ತೆ – ಈ ಪ್ರಮುಖ ಬೀದಿಗಳ ಮೂಲಕ ತೆರಳಿ ಅಬ್ಬಲಗೆರೆ ಈಶ್ವರ ವನದಲ್ಲಿ ತೆರವುಕಂಡಿತು.

ಪ್ರಮುಖರಾದ ಡಾ . ಶ್ರೀಕಾಂತ್ ಹೆಗ್ಡೆ , ಡಾ . ಪರಮೇಶ್ವರ್ , ಡಾ . ವಿನಾಯಕ್ ಬಾಬು , ಡಾ . ಚಂದ್ರಪ್ರಕಾಶ್ , ಡಾ . ಶಂಭುಲಿಂಗ , ಡಾ . ಕೌಸ್ತುಭ ಹಾಗು ಶ್ರೀ . ವಿಜಯಕುಮಾರ್ , ಶ್ರೀ . ಗಿರೀಶ್ , ಶ್ರೀ. ನವ್ಯಶ್ರೀ ನಾಗೇಶ್ ಉಪಸ್ಥಿತರಿದ್ದರು . ಐಎಂಎ ಕಾರ್ಯದರ್ಶಿ ಡಾ . ರಕ್ಷಾ ರಾವ್ ಸ್ವಾಗತ ಕೋರಿ ನಿರೂಪಿಸಿದರು . ಎಸ್ ಸಿ ಸಿ ಅಧ್ಯಕ್ಷ ಶ್ರೀ . ಶ್ರೀಕಾಂತ್ ವಂದನಾರ್ಪಣೆ ಮಾಡಿದರು.

ಹಿರಿಯ ಕಿರಿಯ ಐಎಂಎ ಹಾಗು ಎಸ್ ಸಿ ಸಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...