Monday, February 2, 2026
Monday, February 2, 2026

KLive Special ಇಂದಿನ ಕೆ ಲೈವ್ ಕವಿತಾಂಗಣ

Date:

KLive Special “ಇದು ಯುಗ ಯುಗದ ಜನರ ಮನೋಧರ್ಮದ ಕವಿತೆ. ನಿತ್ಯ ಸತ್ಯ ಜಗಧರ್ಮದ ವಿಷಾದದ ಭಾವಗೀತೆ. ಅಂತರ್ಜಾಲದಿ ಕಂಡ ಈ ಅನನ್ಯ ಚಿತ್ರವೇ ಈ ಮಾರ್ಮಿಕ ಕವಿತೆಗೆ ಪ್ರೇರಣವಾದದ್ದು.. ಕಾರಣವಾದದ್ದು. ಅಂದಿಗೂ ಇಂದಿಗೂ ಎಂದಿಗೂ ಈ ಲೋಕಕ್ಕೆ ಪರಿವರ್ತನೆಗೆ ಒಗ್ಗಿಕೊಳ್ಳಲು ಏನೆಲ್ಲ ಸಂಕಷ್ಟ? ಪರಿವರ್ತಕರನ್ನು ಒಪ್ಪಿಕೊಳ್ಳಲು ಅದೆಷ್ಟು ಕಷ್ಟ..?? ಏನಂತೀರಾ..???” – ಪ್ರೀತಿಯಿಂದ ಎ.ಎನ್.ರಮೇಶ್.ಗುಬ್ಬಿ.

ಜಗಧರ್ಮ..!

ಮಿಥ್ಯೆಯ ದರಬಾರಿನಲ್ಲಿ
ಸತ್ಯಕ್ಕೆ ಮರಣ ದಂಡನೆ
ಸುಳ್ಳಾಡುವವರ ಸಾಮ್ರಾಜ್ಯದಿ
ನಿಜ ನುಡಿವವನಿಗೆ ನೇಣು.!

ಬೆತ್ತಲೆಜನರ ಸಂತೆಯಲ್ಲಿ
ಬಟ್ಟೆಗೆ ಸದಾ ಬಹಿಷ್ಕಾರ
ನಗ್ನವಾದವರ ನಡುವಲ್ಲಿ
ಅರಿವೆ ತೊಟ್ಟರೆ ಕಲ್ಲೇಟು.!

ಸೈತಾನರ ನಾಡಿನಲ್ಲಿ
ಸಾಧುವಾದರೆ ಗಡಿಪಾರು
ಕಟುಕರ ಚಕ್ರಾಧಿಪತ್ಯದಲ್ಲಿ
ಕರುಣಿಯಾದರೆ ಶಿರಚ್ಚೇದನ.!

ಮೂರ್ಖರ ನಗರದಲ್ಲಿ
ಮೇಧಾವಿಗೆ ನಿತ್ಯಾಪಮಾನ
ದಡ್ಡರ ಒಡ್ಡೋಲಗದಲ್ಲಿ
ಚತುರನಿಗೆ ದಿನವು ಶಿಕ್ಷೆ.!

ಕಡುಭ್ರಷ್ಟರ ಬಜಾರಿನಲ್ಲಿ
ನಿಷ್ಟನೆಂದೂ ನಿಕೃಷ್ಟ
ವಂಚಕರ ಒಕ್ಕೂಟದಲಿ
ಪ್ರಾಮಾಣಿಕನಿಗೆ ಪ್ರತಿಕ್ಷಣ ಸಂಕಷ್ಟ.!

KLive Special ಯುಗಯುಗದಿಂದ ಹೀಗೆ
ಜಗದ ಜಾತಕದ ಬಗೆ
ತನ್ನೊಡಲ ಬೆಳಗುವ ಬೆಳಕನ್ನೇ
ಒಪ್ಪಿಕೊಳ್ಳದ ಕತ್ತಲಿನ ಹಾಗೆ.!

ಒಳಿತು ಒಳ್ಳೆಯತನಗಳಿಗೆ
ಬೆಳಕು ಬದಲಾವಣೆಗಳಿಗೆ
ಒಪ್ಪದ ಒಗ್ಗಿಕೊಳ್ಳದ ರೀತಿ
ಕ್ರಾಂತಿ ಸಂಕ್ರಾಂತಿಯಿಂದಲೇ
ಪರಿವರ್ತಿಪ ಲೋಕದ ಚಿರನೀತಿ.!

  • ಎ.ಎನ್.ರಮೇಶ್. ಗುಬ್ಬಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...