Friday, September 27, 2024
Friday, September 27, 2024

Goodluck Care Center ಗುಡ್ ಲಕ್ ಸಂಸ್ಥೆಯು ವೃದ್ಧರ ಅಸ್ವಸ್ಥರ ಬುದ್ಧಿಮಾಂದ್ಯರಿಗೆ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ- ಪೂರ್ಣಿಮಾ ಸುನೀಲ್

Date:

Goodluck Care Center ಸಮಾಜದಲ್ಲಿ ಅನೇಕ ಸೇವಾ ಸಂಸ್ಥೆಗಳಿದ್ದು, ಅತ್ಯಂತ ಕಷ್ಟದಲ್ಲಿ ಜೀವನ ನಡೆಸುತ್ತಿರುವ, ಅಗತ್ಯ ಇರುವವರಿಗೆ ನೆರವು ನೀಡುವುದು ತುಂಬಾ ಮುಖ್ಯ ಎಂದು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ವತಿಯಿಂದ ಆರೈಕೆ ಕೇಂದ್ರದ ಅನ್ನಪೂರ್ಣೇಶ್ವರಿ ಪ್ರಸಾದ ಯೋಜನೆಗೆ ಆ ರ್ಥಿಕ ನೆರವು ಹಾಗೂ ಆಹಾರ ಸಾಮಾಗ್ರಿ ನೀಡಿ ಮಾತನಾಡಿ, ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ವೃದ್ಧರ, ಪಾರ್ಶ್ವವಾಯು ಪೀಡಿತರ, ಬುದ್ದಿಮಾಂದ್ಯರ ಸೇವೆ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ತುಂಬಾ ಕಷ್ಟಕರ ಆಗಿರುವ ಪರಿಸ್ಥಿತಿಯಲ್ಲಿ ಸೇವಾ ಮನೋಭಾವದಿಂದ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

Goodluck Care Center ಪಂಚಾಕ್ಷರಿ ಹಿರೇಮಠ ಅವರು 70ನೇ ವಯಸ್ಸಿನಲ್ಲಿಯೂ ಸ್ವಾರ್ಥರಹಿತ ಸೇವೆ ಮಾಡುತ್ತಿರುವುದು ಮನುಕುಲಕ್ಕೆ ಮಾದರಿಯಾಗಿದೆ. ಇಂತಹ ಸೇವಾ ಮನೋಭಾವ ಹೊಂದಿರುವ ಸಂಸ್ಥೆಗಳಿಗೆ ಸಾರ್ವಜನಿಕರು ಹೆಚ್ಚು ಭೇಟಿ ನೀಡಿ ನೆರವು ನೀಡಬೇಕು ಎಂದರು.

ಇಂದಿನ ಯುಗದಲ್ಲಿ ಮನೆಯಲ್ಲಿ ಇರುವ ಹಿರಿಯರನ್ನು ನೋಡಿಕೊಳ್ಳುವುದು ಕಷ್ಟ ಎಂದು ಭಾವಿಸುವ ಜನರೇ ಜಾಸ್ತಿ. ಇಲ್ಲಿ ಮಾನಸಿಕವಾಗಿ ನೊಂದವರನ್ನು, ಕಷ್ಟದಲ್ಲಿರುವ ಹಿರಿಯರನ್ನು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುತ್ತಿರುವುದು ಉತ್ತಮ ಸೇವೆ ಎಂದು ಹೇಳಿದರು.

ಗುಡ್‌ಲಕ್ ಆರೈಕೆ ಕೇಂದ್ರದ ಅಧ್ಯಕ್ಷ ಯು.ರವೀಂದ್ರನಾಥ ಐತಾಳ್ ಮಾತನಾಡಿ, ಶಿವಮೊಗ್ಗದ ನಾಗರೀಕರ ಸಹಕಾರದಿಂದ ಸಂಸ್ಥೆ ಉತ್ತಮವಾಗಿ ನಡೆಯುತ್ತಿದೆ ಎಂದರು. ನಿರ್ದೇಶಕ ಜಿ.ವಿಜಯ್‌ಕುಮಾರ್ ಮಾತನಾಡಿ, ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಗುಡ್‌ಲಕ್ ಆರೈಕೆ ಕೇಂದ್ರಕ್ಕೆ ಜನರು ಹೆಚ್ಚಿನ ನೆರವು ನೀಡಬೇಕು ಎಂದು ತಿಳಿಸಿದರು.

ಆರೈಕೆ ಕೇಂದ್ರದ ಕಾರ್ಯದರ್ಶಿ ಪಂಚಾಕ್ಷರಿ ಹಿರೇಮಠ, ರೋಟರಿ ಉತ್ತರ ಮಾಜಿ ಅಧ್ಯಕ್ಷ ಜೆ.ಶರವಣ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...