Monday, May 4, 2026
Monday, May 4, 2026

Goodluck Care Center ಗುಡ್ ಲಕ್ ಸಂಸ್ಥೆಯು ವೃದ್ಧರ ಅಸ್ವಸ್ಥರ ಬುದ್ಧಿಮಾಂದ್ಯರಿಗೆ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ- ಪೂರ್ಣಿಮಾ ಸುನೀಲ್

Date:

Goodluck Care Center ಸಮಾಜದಲ್ಲಿ ಅನೇಕ ಸೇವಾ ಸಂಸ್ಥೆಗಳಿದ್ದು, ಅತ್ಯಂತ ಕಷ್ಟದಲ್ಲಿ ಜೀವನ ನಡೆಸುತ್ತಿರುವ, ಅಗತ್ಯ ಇರುವವರಿಗೆ ನೆರವು ನೀಡುವುದು ತುಂಬಾ ಮುಖ್ಯ ಎಂದು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ವತಿಯಿಂದ ಆರೈಕೆ ಕೇಂದ್ರದ ಅನ್ನಪೂರ್ಣೇಶ್ವರಿ ಪ್ರಸಾದ ಯೋಜನೆಗೆ ಆ ರ್ಥಿಕ ನೆರವು ಹಾಗೂ ಆಹಾರ ಸಾಮಾಗ್ರಿ ನೀಡಿ ಮಾತನಾಡಿ, ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ವೃದ್ಧರ, ಪಾರ್ಶ್ವವಾಯು ಪೀಡಿತರ, ಬುದ್ದಿಮಾಂದ್ಯರ ಸೇವೆ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ತುಂಬಾ ಕಷ್ಟಕರ ಆಗಿರುವ ಪರಿಸ್ಥಿತಿಯಲ್ಲಿ ಸೇವಾ ಮನೋಭಾವದಿಂದ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

Goodluck Care Center ಪಂಚಾಕ್ಷರಿ ಹಿರೇಮಠ ಅವರು 70ನೇ ವಯಸ್ಸಿನಲ್ಲಿಯೂ ಸ್ವಾರ್ಥರಹಿತ ಸೇವೆ ಮಾಡುತ್ತಿರುವುದು ಮನುಕುಲಕ್ಕೆ ಮಾದರಿಯಾಗಿದೆ. ಇಂತಹ ಸೇವಾ ಮನೋಭಾವ ಹೊಂದಿರುವ ಸಂಸ್ಥೆಗಳಿಗೆ ಸಾರ್ವಜನಿಕರು ಹೆಚ್ಚು ಭೇಟಿ ನೀಡಿ ನೆರವು ನೀಡಬೇಕು ಎಂದರು.

ಇಂದಿನ ಯುಗದಲ್ಲಿ ಮನೆಯಲ್ಲಿ ಇರುವ ಹಿರಿಯರನ್ನು ನೋಡಿಕೊಳ್ಳುವುದು ಕಷ್ಟ ಎಂದು ಭಾವಿಸುವ ಜನರೇ ಜಾಸ್ತಿ. ಇಲ್ಲಿ ಮಾನಸಿಕವಾಗಿ ನೊಂದವರನ್ನು, ಕಷ್ಟದಲ್ಲಿರುವ ಹಿರಿಯರನ್ನು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುತ್ತಿರುವುದು ಉತ್ತಮ ಸೇವೆ ಎಂದು ಹೇಳಿದರು.

ಗುಡ್‌ಲಕ್ ಆರೈಕೆ ಕೇಂದ್ರದ ಅಧ್ಯಕ್ಷ ಯು.ರವೀಂದ್ರನಾಥ ಐತಾಳ್ ಮಾತನಾಡಿ, ಶಿವಮೊಗ್ಗದ ನಾಗರೀಕರ ಸಹಕಾರದಿಂದ ಸಂಸ್ಥೆ ಉತ್ತಮವಾಗಿ ನಡೆಯುತ್ತಿದೆ ಎಂದರು. ನಿರ್ದೇಶಕ ಜಿ.ವಿಜಯ್‌ಕುಮಾರ್ ಮಾತನಾಡಿ, ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ಗುಡ್‌ಲಕ್ ಆರೈಕೆ ಕೇಂದ್ರಕ್ಕೆ ಜನರು ಹೆಚ್ಚಿನ ನೆರವು ನೀಡಬೇಕು ಎಂದು ತಿಳಿಸಿದರು.

ಆರೈಕೆ ಕೇಂದ್ರದ ಕಾರ್ಯದರ್ಶಿ ಪಂಚಾಕ್ಷರಿ ಹಿರೇಮಠ, ರೋಟರಿ ಉತ್ತರ ಮಾಜಿ ಅಧ್ಯಕ್ಷ ಜೆ.ಶರವಣ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...