Monday, December 15, 2025
Monday, December 15, 2025

MESCOM ಚಿಕ್ಕಮಗಳೂರು ಜಿಲ್ಲೆ ಬಸರವಳ್ಳಿ ಮತ್ತು ಕೆಳಗಣಿ ಗ್ರಾಮಗಳಿಗೆ ವಿದ್ಯುತ್ ಅಡಚಣೆ ಸೂಕ್ತ ಕ್ರಮಕ್ಕಾಗಿ ಮನವಿ

Date:

MESCOM ಚಿಕ್ಕಮಗಳೂರು ತಾಲ್ಲೂಕಿನ ಬಸರವಳ್ಳಿ ಹಾಗೂ ಕೆಳಗಣೆ ಗ್ರಾಮಗಳಿಗೆ ಕೃಷಿ ಚಟುವಟಿಕೆ ಹಾಗೂ ಇನ್ನಿತರೆ ಕೆಲಸಗಳಿಗೆ ಸ್ಥಳೀಯ ಮೆಸ್ಕಾಂ ಅಧಿಕಾರಿಗಳು ಸೂಕ್ತ ವಿದ್ಯುತ್ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತಾಲ್ಲೂಕು ಘಟಕ ನಗರದ ಮೆಸ್ಕಾಂ ಕಚೇರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದೆ.

ಈ ಸಂಬಂಧ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಜಿ. ಮಾರುತಿ ಅವರಿಗೆ ಮನವಿ ಸಲ್ಲಿಸಿದ ತಾಲ್ಲೂಕು ಘಟಕದ ಕಾರ್ಯದರ್ಶಿ ಕೆ.ಇ.ಪೂಣೇಶ್ ಸ್ಥಳೀಯ ಕೆಇಬಿ ಅಧಿಕಾರಿಗಳು ಇವೆರಡು ಗ್ರಾಮಗಳಲ್ಲಿ ವಿದ್ಯುತ್ ಸಮರ್ಪಕವಾಗಿ ವ್ಯವಸ್ಥೆ ಕಲ್ಪಿಸದೇ ಅಕ್ರಮವೆಸಗುತ್ತಿದೆ ಎಂದು ದೂರಿದರು.

MESCOM ಬಸರವಳ್ಳಿ ಗ್ರಾ.ಪಂ. ಸಮೀಪ ಟಿಸಿ ಇದೆ. ಇದರಲ್ಲಿ 08 ಹೆಚ್.ಪಿ.ಯಿಂದ ಸುಮಾರು 30 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಹೊಸ ಕಲೆಕ್ಷನ್ 03 ಹೆಚ್.ಪಿ. ಕೇಳಿದರೆ ಓವರ್‌ಲೋಡ್ ಎಂದು ಹೇಳಿ ಆ ಟಿಸಿಗೆ 04 ಹೆಚ್‌ಪಿ ಹೆಚ್ಚಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ ಎಂದರು.

ಮೆಸ್ಕಾಂ ಅಧಿಕಾರಿಗಳು ಈ ಭಾಗದಲ್ಲಿ ಕಂಬಗಳಿಲ್ಲದೇ ಕೇಬಲ್‌ಗಳ ಮೂಲಕ ಸಂಪರ್ಕವನ್ನು ನೀಡಿರುತ್ತಾರೆ. ಬೇರೆ ಕಡೆಗಳಲ್ಲಿ 25 ಟಿಸಿಯಲ್ಲಿ ಸುಮಾರು 05 ರಿಂದ 10 ಪಂಪ್‌ಸೆಟ್ ಮೂಲಕ 50 ಮನೆಗೆ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಅದೇ ರೀತಿ ಕೆಳಗಣೆ ಬಾರಮನೆಯಲ್ಲಿ 25 ಕೆವಿ ಟಿಸಿಯಲ್ಲಿ 10 ರಿಂದ 15 ಬೋರ್‌ವೆಲ್ ಮತ್ತು 40 ಮನೆಗಳಿಗೆ ಸಂಪರ್ಕ ಕಲ್ಪಿಸಿರುವ ಪರಿಣಾಮ ತೋಟದ ಒಳಗಿನ ಲೈನ್‌ನಲ್ಲಿ ಕೆಲಸಗಾರರಿಗೆ, ರೈತರಿಗೆ ಸಣ್ಣಪುಟ್ಟ ಅನಾಹುತಗಳಾಗಿದ್ದು ಲೈನ್ ರಸ್ತೆ ಪಕ್ಕದಲ್ಲಿ ಅಳವಡಿಸಿ ಹೆಚ್ಚುವರಿ ಟಿಸಿ ತುರ್ತಾಗಿ ಹಾಕಿಕೊಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ಅನಾಹುತಗಳಾಗದಂತೆ ತಪ್ಪಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...