Monday, March 23, 2026
Monday, March 23, 2026

Tourism Shivamogga ನೇಪಾಳದಿಂದ ಶಿವಮೊಗ್ಗ ಗೋಪಾಳದವರೆಗೆ ಬೈಕ್ ಜಾಥಾ

Date:

Tourism Shivamogga ಪ್ರವಾಸ ಕೈಗೊಳ್ಳುವುದರಿಂದ ರಾಜ್ಯಗಳ ವೈವಿಧ್ಯಮಯ ಸಂಸ್ಕೃತಿಯ ಪರಿಚಯ ಹಾಗೂ ತಿಳವಳಿಕೆ ಮೂಡುತ್ತದೆ. ವಿವಿಧ ರಾಜ್ಯಗಳ ಜನರ ಜೀವನಶೈಲಿ ತಿಳಿಯುತ್ತದೆ ಎಂದು ಶಿವಮೊಗ್ಗ ಬೈಕ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ಹೇಳಿದರು.

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯ ತರುಣೋದಯ ಘಟಕದ ವತಿಯಿಂದ “ನೇಪಾಳ ದಿಂದ ಶಿವಮೊಗ್ಗದ ಗೋಪಾಳ” ದ ವರೆಗೆ ಆಯೋಜಿಸಿರುವ ಬೈಕ್ ರ‍್ಯಾಲಿ ನಡೆಸುತ್ತಿರುವ ಸಾಹಸಿಗರಿಗೆ ಬೀಳ್ಕೋಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈಗಾಗಲೇ ಬೈಕ್ ಮೂಲಕ ಶಿವಮೊಗ್ಗದಿಂದ ಜಮ್ಮು ಕಾಶ್ಮೀರ, ಕನ್ಯಾಕುಮಾರಿ, ಅಸ್ಸಾಂನಿಂದ ಗುಜರಾತ್ ಹೀಗೆ ದೇಶಾದ್ಯಂತ ಸಂಚರಿಸಿದ್ದೇವೆ.
ಇದೀಗ ನೇಪಾಳದಿಂದ ಶಿವಮೊಗ್ಗದವರೆಗೂ ಬೈಕ್ ರ‍್ಯಾಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Tourism Shivamogga ಪ್ರಥಮವಾಗಿ ಅಂತರರಾಷ್ಟ್ರೀಯ ಬೈಕ್ ಸವಾರಿಯ ಮುಂದಾಳತ್ವ ವಹಿಸಿರುವ ಅ.ನಾ.ವಿಜಯೇಂದ್ರ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಕ್ಲಬ್, ವಾಣಿಜ್ಯ ಸಂಘ, ಯೂತ್ ಹಾಸ್ಟೆಲ್ಸ್ ಸಹಕಾರ ನೀಡುತ್ತಿದೆ.

ಪ್ರವಾಸೋದ್ಯಮ ಉನ್ನತೀಕರಣಕ್ಕಾಗಿ ಶಿವಮೊಗ್ಗಕ್ಕೆ ಬನ್ನಿ, ಸೇಫ್ ಡ್ರೈವಿಂಗ್, ಮಹಿಳಾ ಸಬಲೀಕರಣ ವಿಚಾರದ ಜಾಗೃತಿ ರ‍್ಯಾಲಿಯಲ್ಲಿ ಮಾಡಲಾಗುತ್ತದೆ ಎಂದು ಹೇಳಿದರು.

ಯೂತ್ ಹಾಸ್ಟೆಲ್ಸ್ ಚರ‍್ಮನ್ ಎಸ್.ಎಸ್.ವಾಗೇಶ್ ಮಾತನಾಡಿ, ಎಲ್ಲ ಹನ್ನೊಂದು ಸವಾರರು ನಮ್ಮ ತರುಣೋದಯ ಘಟಕದ ಅಜೀವ ಸದಸ್ಯರು. ನಮಗೆ ಹೆಮ್ಮೆ ತರುವ ವಿಚಾರ ಎಲ್ಲರ ಪ್ರಯಾಣ ಸುಖಕರವಾಗಿರಲಿ ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಎನ್.ಗೋಪಿನಾಥ್ ಮಾತನಾಡಿ, ಉದ್ದಿಮೆ ದಾರರಿಗೆ ಧೈರ್ಯ ಅತೀ ಮುಖ್ಯ. ಈ ರೀತಿಯ ಸಾಹಸ ಮಾಡುವ ಪ್ರವೃತಿಯವರು ಎಲ್ಲಾ ಸಂದರ್ಭದಲ್ಲಿಯೂ ಎದೆಗುಂದದೆ ಮುನ್ನಡೆಯುತ್ತಾರೆ.

ನಮ್ಮ ವಾಣಿಜ್ಯ ಸಂಘದ 60ನೇ ವರ್ಷದ ಸಂಭ್ರಮ ಆಚರಣೆಯ ಪ್ರಥಮ ಕಾರ್ಯಕ್ರಮವಾಗಿ ಅಂತರರಾಷ್ಟ್ರೀಯ ಸಾಹಸ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವ ಮೂಲಕ, ಉದ್ದಿಮೆದಾರರು ಸಾಹಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರ ನೀಡುವುದಾಗಿ ತಿಳಿಸಿದರು.

ಪ್ರಮುಖರಾದ ನಾಗರಾಜ್, ಜಿ.ವಿಜಯಕುಮಾರ್, ರಮೇಶ್ ಬಾಬು, ಶ್ರೀಕಾಂತ್, ಗಿಡ್ಡಪ್ಪ, ಮಂಜುನಾಥ್, ಗಿರೀಶ್ ಕಾಮತ್, ವಿಜಯೇಂದ್ರ, ರವೀಂದ್ರ, ವಿನಾಯಕ್ ಬಾಯರಿ, ಮಮತಾ, ಭಾರತಿ, ಪ್ರಕೃತಿ, ನಾಗರಾಜ್ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...