Thursday, March 19, 2026
Thursday, March 19, 2026

Brahmana Mahasabha DVG ಓದಿದ್ದನ್ನ ಕೇಳಿದ್ದನ್ನ ಅರ್ಥೈಸಿ ಮನಕ್ಕೆ ತಂದುಕೊಳ್ಳಬೇಕು- ಎಚ್.ಬಿ.ಮಂಜುನಾಥ್

Date:

Brahmana Mahasabha DVG ಯಾವುದೇ ಸದ್ವಿದ್ಯೆಯಾಗಲಿ ಓದಿದಾಕ್ಷಣ ಅಥವಾ ಕೇಳಿದಾಕ್ಷಣ ಅದು ಜ್ಞಾನವಾಗುವುದಿಲ್ಲ, ಓದಿದ್ದನ್ನು ಅಥವಾ ಕೇಳಿದ್ದನ್ನು ಅರ್ಥ ಮಾಡಿಕೊಳ್ಳುತ್ತಾ ಮನಸ್ಸಿಗೆ ತೆಗೆದುಕೊಳ್ಳಬೇಕು, ಹಾಗೆ ಮನಸ್ಸಿಗೆ ತೆಗೆದುಕೊಂಡದ್ದನ್ನು ಗಟ್ಟಿಯಾಗಿ ನೆಲೆ ನಿಲ್ಲಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಎಚ್ ಬಿ ಮಂಜುನಾಥ್ ಕಿವಿಮಾತು ಹೇಳಿದರು.

ಅವರು ದಾವಣಗೆರೆ ಬ್ರಾಹ್ಮಣ ಸಮಾಜ ಸೇವಾ ಸಂಘ ವತಿಯಿಂದ ಏರ್ಪಾಡಾಗಿರುವ ವಿಪ್ರವಟು ಶಿಕ್ಷಣ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ತ್ರಯಂಗ ಯೋಗದ ಬಗ್ಗೆ ಮಾತನಾಡುತ್ತಾ ವೇದ, ಉಪನಿಷತ್ತು, ಆಗಮ, ಪುರಾಣ, ಇತಿಹಾಸಾದಿಗಳ ಕಾಲದಿಂದಲೂ ಶ್ರವಣ, ಮನನ, ನಿದಿಧ್ಯಾಸನವೆಂಬ ತ್ರಯಂಗ ಯೋಗಕ್ಕೆ ಪ್ರಾಮುಖ್ಯತೆ ಇದ್ದು ಕೇಳಿದ್ದನ್ನು ಓದಿದ್ದನ್ನು ಅರ್ಥಮಾಡಿಕೊಳ್ಳುತ್ತಾ ಜೀವನ ಅನುಭವಗಳೊಂದಿಗೆ ಅದನ್ನು ಸಮೀಕರಿಸುತ್ತಾ ಮೌಲ್ಯಯುತವಾದವುಗಳನ್ನು ಮನಸ್ಸಿಗೆ ತೆಗೆದುಕೊಂಡು ನೆಲೆಗೊಳ್ಳಿಸಿಕೊಂಡಾಗ ಜ್ಞಾನವಾಗಿ ಇರುತ್ತದೆ ಎಂದರು.

Brahmana Mahasabha DVG ಕೇವಲ ಬಾಯಿ ಪಾಠ ಜ್ಞಾನವಾಗುವುದಿಲ್ಲ, ಪುನರುಚ್ಛಾರವಾಗುತ್ತದೆ ಅಷ್ಟೇ, ಮಂತ್ರಗಳೂ ಅಷ್ಟೇ, ಕೇವಲ ಹೇಳಿದರೆ ಕೇಳಿದರೆ ಪ್ರಯೋಜನವಿಲ್ಲ, ಅರ್ಥ ತಿಳಿದುಕೊಳ್ಳಬೇಕು, ಅದೂ ಸಹ ನಿಘಂಟನ್ನು ನೋಡಿ ಪದ ಪದಗಳ ಅರ್ಥ ತಿಳಿಯುತ್ತಾ ಹೋದರೆ ಮಂತ್ರಗಳೂ ನಿಸ್ಸಾರವೆನಿಸುತ್ತವೆ.

ಮಂತ್ರಗಳ ಆದಿ ಭೌತಿಕದ ಆದಿ ದೈವಿಕದ ಆಚೆಗಿನ ಆಧ್ಯಾತ್ಮಿಕ ಅರ್ಥ ತಿಳಿದುಕೊಂಡಾಗ ಮಾತ್ರ ಅವುಗಳ ಮೌಲ್ಯ ಗೊತ್ತಾಗುತ್ತದೆ, ಮನದಟ್ಟಾಗುತ್ತದೆ. ಅದಕ್ಕಾಗಿ ಇಂತಹ ಶಿಬಿರಗಳು ವಿದ್ಯಾರ್ಥಿ ದೆಸೆಯಿಂದಲೇ ಅಗತ್ಯ ಎಂದ ಎಚ್ ಬಿ ಮಂಜುನಾಥ್ ಜ್ಞಾನದಿಂದ ಭಯ ಶೋಕ ಮೋಹಗಳ ನಿವಾರಣೆ ಸಾಧ್ಯ ಎಂಬುದನ್ನು ಉದಾಹರಣೆಗಳ ಸಹಿತ ವಿವರಿಸಿದರು.

ದಾವಣಗೆರೆ ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಡಾ. ಶಶಿಕಾಂತ್, ಲೆಕ್ಕಪರಿಶೋಧಕರಾದ ವಿನಾಯಕ ಜೋಶಿ, ಶ್ರೀನಿವಾಸ್, ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು. ಫಲ ಸಮರ್ಪಣೆಯೊಂದಿಗೆ ಮಂಜುನಾಥರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...