Thursday, June 18, 2026
Thursday, June 18, 2026

Brahmana Mahasabha DVG ಓದಿದ್ದನ್ನ ಕೇಳಿದ್ದನ್ನ ಅರ್ಥೈಸಿ ಮನಕ್ಕೆ ತಂದುಕೊಳ್ಳಬೇಕು- ಎಚ್.ಬಿ.ಮಂಜುನಾಥ್

Date:

Brahmana Mahasabha DVG ಯಾವುದೇ ಸದ್ವಿದ್ಯೆಯಾಗಲಿ ಓದಿದಾಕ್ಷಣ ಅಥವಾ ಕೇಳಿದಾಕ್ಷಣ ಅದು ಜ್ಞಾನವಾಗುವುದಿಲ್ಲ, ಓದಿದ್ದನ್ನು ಅಥವಾ ಕೇಳಿದ್ದನ್ನು ಅರ್ಥ ಮಾಡಿಕೊಳ್ಳುತ್ತಾ ಮನಸ್ಸಿಗೆ ತೆಗೆದುಕೊಳ್ಳಬೇಕು, ಹಾಗೆ ಮನಸ್ಸಿಗೆ ತೆಗೆದುಕೊಂಡದ್ದನ್ನು ಗಟ್ಟಿಯಾಗಿ ನೆಲೆ ನಿಲ್ಲಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಎಚ್ ಬಿ ಮಂಜುನಾಥ್ ಕಿವಿಮಾತು ಹೇಳಿದರು.

ಅವರು ದಾವಣಗೆರೆ ಬ್ರಾಹ್ಮಣ ಸಮಾಜ ಸೇವಾ ಸಂಘ ವತಿಯಿಂದ ಏರ್ಪಾಡಾಗಿರುವ ವಿಪ್ರವಟು ಶಿಕ್ಷಣ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ತ್ರಯಂಗ ಯೋಗದ ಬಗ್ಗೆ ಮಾತನಾಡುತ್ತಾ ವೇದ, ಉಪನಿಷತ್ತು, ಆಗಮ, ಪುರಾಣ, ಇತಿಹಾಸಾದಿಗಳ ಕಾಲದಿಂದಲೂ ಶ್ರವಣ, ಮನನ, ನಿದಿಧ್ಯಾಸನವೆಂಬ ತ್ರಯಂಗ ಯೋಗಕ್ಕೆ ಪ್ರಾಮುಖ್ಯತೆ ಇದ್ದು ಕೇಳಿದ್ದನ್ನು ಓದಿದ್ದನ್ನು ಅರ್ಥಮಾಡಿಕೊಳ್ಳುತ್ತಾ ಜೀವನ ಅನುಭವಗಳೊಂದಿಗೆ ಅದನ್ನು ಸಮೀಕರಿಸುತ್ತಾ ಮೌಲ್ಯಯುತವಾದವುಗಳನ್ನು ಮನಸ್ಸಿಗೆ ತೆಗೆದುಕೊಂಡು ನೆಲೆಗೊಳ್ಳಿಸಿಕೊಂಡಾಗ ಜ್ಞಾನವಾಗಿ ಇರುತ್ತದೆ ಎಂದರು.

Brahmana Mahasabha DVG ಕೇವಲ ಬಾಯಿ ಪಾಠ ಜ್ಞಾನವಾಗುವುದಿಲ್ಲ, ಪುನರುಚ್ಛಾರವಾಗುತ್ತದೆ ಅಷ್ಟೇ, ಮಂತ್ರಗಳೂ ಅಷ್ಟೇ, ಕೇವಲ ಹೇಳಿದರೆ ಕೇಳಿದರೆ ಪ್ರಯೋಜನವಿಲ್ಲ, ಅರ್ಥ ತಿಳಿದುಕೊಳ್ಳಬೇಕು, ಅದೂ ಸಹ ನಿಘಂಟನ್ನು ನೋಡಿ ಪದ ಪದಗಳ ಅರ್ಥ ತಿಳಿಯುತ್ತಾ ಹೋದರೆ ಮಂತ್ರಗಳೂ ನಿಸ್ಸಾರವೆನಿಸುತ್ತವೆ.

ಮಂತ್ರಗಳ ಆದಿ ಭೌತಿಕದ ಆದಿ ದೈವಿಕದ ಆಚೆಗಿನ ಆಧ್ಯಾತ್ಮಿಕ ಅರ್ಥ ತಿಳಿದುಕೊಂಡಾಗ ಮಾತ್ರ ಅವುಗಳ ಮೌಲ್ಯ ಗೊತ್ತಾಗುತ್ತದೆ, ಮನದಟ್ಟಾಗುತ್ತದೆ. ಅದಕ್ಕಾಗಿ ಇಂತಹ ಶಿಬಿರಗಳು ವಿದ್ಯಾರ್ಥಿ ದೆಸೆಯಿಂದಲೇ ಅಗತ್ಯ ಎಂದ ಎಚ್ ಬಿ ಮಂಜುನಾಥ್ ಜ್ಞಾನದಿಂದ ಭಯ ಶೋಕ ಮೋಹಗಳ ನಿವಾರಣೆ ಸಾಧ್ಯ ಎಂಬುದನ್ನು ಉದಾಹರಣೆಗಳ ಸಹಿತ ವಿವರಿಸಿದರು.

ದಾವಣಗೆರೆ ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಡಾ. ಶಶಿಕಾಂತ್, ಲೆಕ್ಕಪರಿಶೋಧಕರಾದ ವಿನಾಯಕ ಜೋಶಿ, ಶ್ರೀನಿವಾಸ್, ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು. ಫಲ ಸಮರ್ಪಣೆಯೊಂದಿಗೆ ಮಂಜುನಾಥರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...