Thursday, June 18, 2026
Thursday, June 18, 2026

District Aam Aadmi Party ಚಿಕ್ಕಮಗಳೂರು ಕ್ಷೇತ್ರಕ್ಕೆ ಆಮ್ ಆದ್ಮಿ ಅಭ್ಯರ್ಥಿಯಾಗಿ ಎಂ.ಪಿ.ಈರೇಗೌಡ ನಾಮಪತ್ರ

Date:

District Aam Aadmi Party ಜಿಲ್ಲಾ ಆಮ್‌ಆದ್ಮಿ ಪಕ್ಷದಿಂದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧೆ ನಡೆಸಲು ಎಂ.ಪಿ.ಈರೇಗೌಡ ಅವರು ಚಿಕ್ಕಮಗಳೂರು ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಎಂ.ಕಿಶೋರ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರಕ್ಕೂ ಮುನ್ನ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ವರೆಗೆ ಪಕ್ಷದ ಮುಖಂ ಡರುಗಳು ಕಾಲ್ನಡಿಗೆ ಜಾಥಾ ನಡೆಸಿದರು.
ನಂತರ ನಾಮಪತ್ರ ಸಲ್ಲಿಸಿ ಮಾತನಾಡಿದ ಅಭ್ಯರ್ಥಿ ಎಂ.ಪಿ.ಈರೇಗೌಡ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಎಪಿ ಪಕ್ಷವು ಜನಸಾಮಾನ್ಯರಲ್ಲಿ ಉತ್ತಮ ಒಲವು ಹೊಂದಿದ್ದು ಮುಂದಿನ ದಿನಗಳ ಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೂಲಕ ದೆಹಲಿ ಮಾದರಿಯ ಆಡಳಿತವನ್ನು ರೂಪಿಸಲಾಗುವುದು ಎಂದು ತಿಳಿಸಿದರು.

District Aam Aadmi Party ಈಗಾಗಲೇ ದೆಹಲಿ ಹಾಗೂ ಪಂಜಾಬ್‌ನಲ್ಲಿ ಎಎಪಿ ರಾಜ್ಯಗಳ ಚುಕ್ಕಾಣ ಹಿಡಿದು ಉತ್ತಮ ಆಡಳಿತ ನೀಡು ತ್ತಿದೆ. ಜೊತೆಗೆ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸುವ ಮೂಲಕ ಪಕ್ಷವು ಅತ್ಯಂತ ಚುರುಕಿನಿಂದ ಕಾರ್ಯನಿರ್ವ ಹಿಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಎಪಿ ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಜಮೀಲ್ ಅಹ್ಮದ್, ಯೂತ್ ಅಧ್ಯಕ್ಷ ಡಿ.ಎಸ್.ಪವನ್‌ಶೆಟ್ಟಿ, ಮಹಿಳಾ ಅಧ್ಯಕ್ಷೆ ನಸೀರ್ ಬೇಗಂ ಹಾಗೂ ಜಾಥಾದಲ್ಲಿ ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ಡಾ|| ಕೆ.ಸುಂದರಗೌಡ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...