Sunday, December 7, 2025
Sunday, December 7, 2025

Legislative Assembly Election ರಾಜ್ಯ ವಿಧಾನಸಭಾ ಚುನಾವಣೆ 2023 ತೀರ್ಥಹಳ್ಳಿ ಕ್ಷೇತ್ರ ಕಿರು ಪರಿಚಯ

Date:

Legislative Assembly Election ವಿಧಾನ ಸಭಾ ಚುನಾವಣೆಗೆ ತೀರ್ಥಹಳ್ಳಿ ಕ್ಷೇತ್ರ ಸಜ್ಜಾಗಿ ನಿಂತಿದೆ. ತೀರ್ಥಹಳ್ಳಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳಲ್ಲಿ ಒಂದಾಗಿದೆ.

2018ರ ಚುನಾವಣೆಯಲ್ಲಿ ತೀರ್ಥಳ್ಳಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವನ್ನು ಸಾಧಿಸಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಆರಗ ಜ್ಞಾನೇಂದ್ರ ಅವರು ಸ್ಪರ್ಧಿಸಿದ್ದರು. ಇವರ ಪ್ರತಿಸ್ಪರ್ಧಿಗಳಾಗಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್, ಜೆಡಿಎಸ್ ಅಭ್ಯರ್ಥಿಯಾಗಿ ಆರ್ .ಎಂ ಮಂಜುನಾಥ್ ಅವರು ಸ್ಪರ್ಧಿಸಿದ್ದರು.

2018ರ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವೆ 21955 ಮತಗಳ ಅಂತರದಲ್ಲಿ ಆರಗ ಜ್ಞಾನೇಂದ್ರ ಅವರು ಗೆಲುವನ್ನು ಸಾಧಿಸಿದ್ದರು.

ಹಾಗಾದ್ರೆ, 2018ರ ಚುನಾವಣೆಯ ಫಲಿತಾಂಶ ಯಾವ ಬಗೆಯಲ್ಲಿತ್ತು ಎಂಬುದರ ವಿವರ ಇಲ್ಲಿದೆ

Legislative Assembly Election ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಆರಗ ಜ್ಞಾನೇಂದ್ರ ಅವರ ಒಟ್ಟು 67,527
ಮತಗಳನ್ನು ಗಳಿಸಿದ್ದರು.

ಕಾಂಗ್ರೆಸ್ ಪಕ್ಷದ ಚುನಾವಣೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕಿಮ್ಮನೆ ರತ್ನಾಕರ್ ಅವರ ಒಟ್ಟು 45,572 ಮತಗಳನ್ನು ಗಳಿಸಿದ್ದರು.

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಆರ್‌ಎ ಮಂಜುನಾಥ್ ಗೌಡ ಅವರ ಒಟ್ಟು 40,127 ಮತಗಳನ್ನು ಗಳಿಸಿದ್ದರು.

ಕ್ಷೇತ್ರದ ವಿಸ್ತೀರ್ಣ ರಾಜ್ಯದಲ್ಲೇ ದೊಡ್ಡದು ಎಂಬ ಕೀರ್ತಿ ಇ ದೆ. ತೀರ್ಥಳ್ಳಿ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 1,86,594. ಇದರಲ್ಲಿ ಪುರುಷರ ಮತದಾರರ ಸಂಖ್ಯೆ 92,114. ಮಹಿಳೆ ಮತದಾರರ ಸಂಖ್ಯೆ 94,453. ತೃತಿಯ ಲಿಂಗಿಗಳು 0 2018ರ ಚುನಾವಣೆಯ ಫಲಿತಾಂಶದ ಪಟ್ಟಿಯಾಗಿದೆ.

2023ರ ವಿಧಾನಸಭಾ ಚುನಾವಣೆಯ ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿಯಾಗಿ ಆರಗ ಜ್ಞಾನೇಂದ್ರ ಅವರು ಸ್ಪರ್ಧಿಸುತ್ತಿದ್ದಾರೆ.

ಇವರ ಪ್ರತಿಸ್ಪರ್ಧೆಯಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಸ್ಪರ್ಧೆಯ ಕಣದಲ್ಲಿ ಇಳಿಯುತ್ತಿದ್ದಾರೆ.

ಮುಂದಿನ ತಿಂಗಳ ಮೇ 10 ಚುನಾವಣೆ ನಡೆಯಲಿದ್ದು. ಅಖಾಡಕ್ಕಿಳಿದ ಸ್ಪರ್ಧಿಗಳಲ್ಲಿ ಯಾರು ಉತ್ತಮರು ಎಂದು ಮತದಾರರು ಆಯ್ಕೆ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...