Sunday, August 2, 2026
Sunday, August 2, 2026

Karnataka Assembly Elections 2023 ಕಾಂಗ್ರೆಸ್ ಗೆ ಬಹುಮತ ಸರ್ಕಾರ ರಚನೆ ಖಚಿತ-ಸಿರಿವಳ್ಳಿ ಪ್ರಸಾದ್

Date:

Karnataka Assembly Elections 2023 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ ಎಂದು ಎ ಐ ಸಿಸಿ ಕಾರ್ಯದರ್ಶಿ ಸಿರಿವಳ್ಳಿ ಪ್ರಸಾದ್ ಅವರು ಹೇಳಿದರು.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಬಿಜೆಪಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಶೇ. 40 ಕಮಿಷನ್ ಸರ್ಕಾರದ ವಿರುದ್ಧ ಜನ ತಿರುಗಿ ಬೀಳಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದಿಂದ ವಿತರಿಸಿರುವ ಗ್ಯಾರಂಟಿ ಕಾರ್ಡ್ ಕಾಂಗ್ರೆಸ್ ಗೆ ಮತ ತರುವಲ್ಲಿ ಸಹಕಾರಿಯಾಗಲಿದೆ. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿ ಕಾರ್ಡ್ ಯೋಜನೆ ಚಾಲನೆ ನೀಡಲಾಗುತ್ತದೆ ಎಂದರು.

Karnataka Assembly Elections 2023 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎ ಚ್.ಸಿ. ಸುಂದರೇಶ್ ಅವರು ಮಾತನಾಡಿ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದೆ. ಪಕ್ಷಕ್ಕೆ ಜನರ ಒಲವಿದೆ ಎಂದು ತಿಳಿದು ಬರುತ್ತಿದೆ. ಶಿವಮೊಗ್ಗ ನಗರದಲ್ಲಿ 40,000ಕ್ಕೂ ಹೆಚ್ಚು ಗ್ಯಾರಂಟಿ ಕಾರ್ಡ್ ನೀಡಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಗೆಲುವಿಗೆ ಅನುಕೂಲಕರವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಚಂದ್ರ ಭೂಪಾಲ, ಚಂದ್ರಶೇಖರ್, ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...