Monday, February 2, 2026
Monday, February 2, 2026

Ambedkar Jayanti ಅಂಬೇಡ್ಕರ್ ಸ್ವಸಹಾಯ ಸಂಘದ ಆಶ್ರಯದಲ್ಲಿ ಅಂಬೇಡ್ಕರ್ ಜಯಂತಿ

Date:

Ambedkar Jayanti ಚಿಕ್ಕಮಗಳೂರು ತಾಲ್ಲೂಕಿನ ತೇಗೂರು ಗ್ರಾಮದಲ್ಲಿ ಅಂಬೇಡ್ಕರ್ ಸ್ವಸಹಾಯ ಸಂಘ ಹಾಗೂ ಜೈ ಮಾರುತಿ ಯುವಕರ ಸಂಘದ ವತಿಯಿಂದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಭಾವಚಿತ್ರಕ್ಕೆ ಮಹಿಳೆಯರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮೂಲಕ ಸಡಗರ ದಿಂದ ಆಚರಿಸಿದರು.

ನಂತರ ಮಾತನಾಡಿದ ಸ್ವಸಹಾಯ ಸಂಘದ ಅಧ್ಯಕ್ಷೆ ಅರುಣಾಕ್ಷಿ ಅಂಬೇಡ್ಕರ್ ಅವರು ಭಾರತದ ಆಶಾಕಿರಣ, ಅವರ ನೇತೃತ್ವದಲ್ಲಿ ರಚಿತವಾದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ. ಅವರ ಸಂವಿಧಾನದಂತೆ ನಾವೆಲ್ಲರೂ ಕಾರ್ಯಪ್ರವೃತ್ತರಾಗಿ ಪ್ರಗತಿ ಪಥದತ್ತ ನಡೆಯಲು ಮುಂದಾಗಬೇಕು ಎಂದು ಹೇಳಿದರು.

ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊದಲ ಭಾರತೀಯರು ಅಂಬೇಡ್ಕರ್ ಅವರು. ಸುಮಾರು 64 ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದರು. ಹಾಗೂ ಒಂಬತ್ತು ಭಾಷೆಗ ಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರಾಗಿ ಸಮಾಜ ಸುಧಾರಕರಾಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿಸಿದರು.

ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಡಾ. ಬಿ.ಆರ್.ಅಂಬೇಡ್ಕರ್. ಅವರ ಜೀವನ ಚರಿತ್ರೆಯನ್ನು ಅಭ್ಯಾಸಿಸುವ ಮೂಲಕ ಅವರ ಆದರ್ಶ, ಆಶಯ ಹಾಗೂ ವಿಚಾರಧಾರೆಗಳನ್ನು ಇಂದಿನ ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಜೈ ಮಾರುತಿ ಯುವಕರ ಸಂಘದ ಯುವಕರು ಹಾಗೂ ಗ್ರಾಮಸ್ಥರು ಅಂಬೇ ಡ್ಕರ್ ಭಾವಚಿತ್ರ ವನ್ನು ಗ್ರಾಮದ ಸುತ್ತಮುತ್ತಲು ಮೆರವಣಿಗೆ ನಡೆಸಿದರು.

Ambedkar Jayanti ಈ ಸಂದರ್ಭದಲ್ಲಿ ಜೈ ಮಾರುತಿ ಯುವಕರ ಸಂಘದ ಆನಂದ್, ಗಿರೀಶ್, ಚೇತನ್, ಮಧು, ನವೀನ್, ಚಂದ್ರು, ಮಂಜು, ಗ್ರಾಮಸ್ಥರಾದ ಶಿವಯ್ಯ, ನಟರಾಜ್, ಸ್ವಸಹಾಯ ಸಂಘದ ಉಪಾಧ್ಯಕ್ಷೆ ರೇಣುಕಾ, ಸದಸ್ಯರಾದ ಭವ್ಯ, ಹೇಮ, ವಸಂತ, ಜಯಮ್ಮ, ಪೂರ್ಣಿಮಾ, ಭಾಗ್ಯಮ್ಮ, ರೇಖಾ, ಮಂಜುಳಾ, ನಂಜಮ್ಮ, ಕವಿತಾ, ಶಂಕರಮ್ಮ, ಸವಿತಾ, ಮಂಜುಳಾ, ಮಾಲತಿ, ನೀಲಮ್ಮ, ಯಶೋಧ, ಹಾಲಮ್ಮ, ಓಂಕಾರಮ್ಮ, ಧನಲಕ್ಷ್ಮೀ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...