Sunday, August 2, 2026
Sunday, August 2, 2026

Ramzan Festival ಕಾಂಗ್ರೆಸ್ ಅಭ್ಯರ್ಥಿಗೆ ರಂಜಾನ್ ಸಮಾರಂಭದಲ್ಲಿ ಭಾಗಿಯಾಗಲು ಅಡ್ಡಿಮಾಡಿದ ಬಗ್ಗೆ ಖಂಡನೆ

Date:

Ramzan Festival ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಸಮೀಪದ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಅವರು ರಂಜಾನ್ ಹಬ್ಬದ ಪ್ರಯುಕ್ತ ಶುಭಾಶಯ ಕೋರಲು ತೆರಳಿದ ಸಂದರ್ಭದಲ್ಲಿ ಕೆಲವು ಮಂದಿ ಅಡ್ಡಿಪಡಿರುವುದಕ್ಕೆ ಕಾಂಗ್ರೆಸ್ ಕಿಸಾಲ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ವೇಳೆ ಹೆಚ್.ಡಿ.ತಮ್ಮಯ್ಯ ಅವರು ಮುಸ್ಲೀಂ ಬಾಂದವರಿಗೆ ಹಬ್ಬದ ಶುಭಾಶಯ ಕೋರುವ ಸ್ಥಳಕ್ಕೆ ತೆರಳದಂತೆ ಕೆಲವು ಪಕ್ಷದ ವ್ಯಕ್ತಿಗಳು ತಡೆವೊಡ್ಡಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಾರ್ಥನೆ ಸ್ಥಳಕ್ಕೆ ತೆರಳದಂತೆ ಅಡ್ಡಿಪಡಿಸಿರುವುದನ್ನು ಗಮನಿಸಿದರೆ ವಿರೋಧ ಪಕ್ಷಗಳು ಸೋಲಿನ ಹತಾಶೆ ಯಿಂದ ಈ ರೀತಿಯ ಮಾಡಲಾಗುತ್ತಿದೆ. ಪ್ರಾರ್ಥನೆ ಸಲ್ಲಿಸುವ ಜಾಗವೆಂದರೆ ದೇವರಿರುವಂತಹ ಜಾಗ. ಅಂತಹ ಜಾಗದಲ್ಲೇ ಹಬ್ಬದ ಶುಭಾಶಯ ಕೋರಲು ತೆರಳದಂತೆ ತಡೆವೊಡ್ಡಿರುವುದನ್ನು ನೋಡಿದರೆ ವಿರೋಧ ಪಕ್ಷದ ಕೈವಾಡವಿದ್ದಂತೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದಿದ್ದಾರೆ.
ಆದ್ದರಿಂದ ಮುಸ್ಲೀಂ ಬಾಂಧವರು ಪ್ರಾರ್ಥನೆ ಸಲ್ಲಿಸುವ ಜಾಗದಲ್ಲಿ ಈ ರೀತಿ ವರ್ತನೆ ಮಾಡಬಾರದು.

Ramzan Festival ಇದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಆ ನಿಟ್ಟಿನಲ್ಲಿ ಪ್ರಾರ್ಥನಾ ಸ್ಥಳಕ್ಕೆ ತಡೆದಿರುವ ವ್ಯಕ್ತಿಗಳು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...