Sunday, December 14, 2025
Sunday, December 14, 2025

Karnataka Neuroscience Academy ಏಪ್ರಿಲ್ 28 ರಂದು ಶಿವಮೊಗ್ಗದಲ್ಲಿ ನರರೋಗ ವಿಜ್ಞಾನ ತಜ್ಞರ ವಾರ್ಷಿಕ ಸಮಾವೇಶ ಉದ್ಘಾಟನೆ

Date:

Karnataka Neuroscience Academy ಕರ್ನಾಟಕ ನ್ಯುರೋ ಸೈನ್ಸ್ ಅಕಾಡೆಮಿ ವತಿಯಿಂದ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನವನ್ನು ಏ.28,29,30ರಂದು ಶಿವಮೊಗ್ಗದ ಸುಬ್ಬಯ್ಯ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಮಟ್ಟದ ಈ ಸಮ್ಮೇಳನದ ಜವಾಬ್ದಾರಿ ಹಾಗೂ ಆತಿಥ್ಯವನ್ನು ಶಿವಮೊಗ್ಗದ ಸಹ್ಯಾದ್ರಿ, ನ್ಯೂರೋ ಸೈಕ್ಯಾಟರಿ ಅಸೋಸಿಯೇಷನ್ ವಹಿಸಲಿದೆ ಎಂದು ಸಮ್ಮೇಳನದ ಆಯೋಜಕ ಡಾ.ಎ. ಶಿವರಾಮಕೃಷ್ಣ ಆರೂರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಏ.28 ಮತ್ತು 29ರಂದು ಪೂರ್ವಭಾವಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ.

Karnataka Neuroscience Academy ಹಾಗೆಯೇ ಏ.29ರ ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ನಡೆಯಲಿದ್ದು, ಮುಖ್ಯ ಅತಿಥಿ ಯಾಗಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ಸೈನ್ಸ್ ನ ಬ್ರೈನ್ ರೀಸರ್ಚ್ ಲ್ಯಾಬ್‌ನ ನಿರ್ದೇಶಕ ಡಾ.ವೈ. ನರಹರಿ, ಎಸ್ ಎನ್ ಪಿಎ ಅಧ್ಯಕ್ಷ ಡಾ. ಹರೀಶ್ ದೇಲಂತಬೆಟ್ಟು, ಡಾ. ಕೆ ಆರ್ ಶ್ರೀಧರ ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಕೆಎನ್ಎ ಅಧ್ಯಕ್ಷರಾದ ಡಾ.ಎಸ್.ಪಿ‌‌. ಬಳಿಗಾರ್ ವಹಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ನರಶಾಸ್ತ್ರ ತಜ್ಞರು, ನರ ರೋಗ ಶಸ್ತ್ರ ಚಿಕಿತ್ಸಕರು, ಮನು ವೈದ್ಯರು ಹಾಗೂ ಇತರೆ ವೈದ್ಯರು ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ನ್ಯುರೋ ಸರ್ಜನ್ ಡಾ.ಎಲ್. ಕೃಷ್ಣಮೂರ್ತಿ, ಡಾ. ಬಿ. ಎ. ಚಂದ್ರಮೌಳಿ, ಡಾ ಜಿ ಎಸ್ ಉಮಾಮಹೇಶ್ವರ ರಾವ್ ಅವರನ್ನು ಸನ್ಮಾನಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...