Monday, December 15, 2025
Monday, December 15, 2025

Chamber Of Commerce Shivamogga ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರ ಚುನಾವಣಾ ಅಭ್ಯರ್ಥಿಗಳೊಂದಿಗೆ ಮುಖಾಮುಖಿ

Date:

Chamber Of Commerce Shivamogga ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ವತಿಯಿಂದ ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನನಗೂ ಪಕ್ಷದ ಅಭ್ಯರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ತಾವು ಶಾಸಕರಾಗಿ ಆಯ್ಕೆಯಾದರೆ ತಮ್ಮ ಅಧಿಕಾರದ ಅವಧಿಯಲ್ಲಿ ಶಿವಮೊಗ್ಗ ಹೇಗಿರಬೇಕು ಎಂಬ ವಿಷಯದ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ತಿಳಿಸಲಾಗಿತ್ತು.

ಅದರಂತೆ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ, ಕಾಂಗ್ರೆಸ್ ಅಭ್ಯರ್ಥಿ ಎಚ್ ಸಿ ಯೋಗೀಶ್, ಹಾಗೂ ಆಮ್ ಆದ್ಮಿ ಪಕ್ಷದ ನೇತ್ರಾವತಿ ಗೌಡ ಅವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

Chamber Of Commerce Shivamogga ಹಿಂದೂ ಸಮಾಜದ ಮೇಲೆ ಹಲ್ಲಿಯಾದರೆ ಹಿಂದುಗಳನ್ನು ಕೊಂದರೆ ಅದನ್ನು ಪ್ರಶ್ನಿಸುವುದು ತಪ್ಪೇ. ಶಾಂತಿಯನ್ನು ಕದಡುವವರು ನಾವಲ್ಲ. ವಿಶ್ವವೇ ಒಂದು ಕುಟುಂಬ ಎಂದು ಹಿಂದು ಸಮಾಜ ಬಯಸುತ್ತದೆ. ಆದರೆ ಅಶಾಂತಿಗೆ ಕಾರಣರಾದವರ ವಿರುದ್ಧ ನಮ್ಮ ಧ್ವನಿ ಸದಾ ಇರುತ್ತದೆ. ಎಲ್ಲರೂ ಒಟ್ಟಾಗಿ ಬಾಳಬೇಕು ಎಂಬುದೇ ನಮ್ಮ ತತ್ವ. ಜೊತೆಗೆ ಶಿವಮೊಗ್ಗದ ಅಭಿವೃದ್ಧಿಗೆ ಯಾವತ್ತಿಗೂ ನಮ್ಮ ಮೊದಲ ಆದ್ಯತೆ ಇದೆ ಎಂದು ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ ಅವರು ತಿಳಿಸಿದರು.

ಶಿವಮೊಗ್ಗದಲ್ಲಿ ಮುಖ್ಯವಾಗಿ ಉದ್ಯೋಗ ನಿರ್ಮಾಣ ಮಾಡಬೇಕಾಗಿದೆ. ಇಲ್ಲಿ ಮಹಿಳೆಯರಿಗೆ ಉದ್ಯೋಗಗಳೇ ಸಿಗುತ್ತಿಲ್ಲ. ಕಷ್ಟಪಟ್ಟು ಓದಿ ಕೆಲಸವಿಲ್ಲದೆ ಮನೆಯಲ್ಲಿ ಇರಬೇಕಾದ ಪರಿಸ್ಥಿತಿ ಇದೆ. ಇವರೆಲ್ಲರಿಗೂ ಉದ್ಯೋಗ ನೀಡುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ . ಮುಖ್ಯವಾಗಿ ಮಹಿಳೆಯರಿಗೆ ರಕ್ಷಣೆ ಬೇಕಾಗಿದೆ. ಶಿವಮೊಗ್ಗಕ್ಕೆ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ ಎಂದು ಆಮ್ ಆದ್ವಿ ಪಾರ್ಟಿಯ ಅಭ್ಯರ್ಥಿ ನೇತ್ರಾವತಿ ಗೌಡ ಅವರು ತಿಳಿಸಿದರು.

Chamber Of Commerce Shivamogga ಶಿವಮೊಗ್ಗಕ್ಕೆ ಮುಖ್ಯವಾಗಿ ಬೇಕಾಗಿರುವುದು ಶಾಂತಿ. ಇಲ್ಲಿ ಶಾಂತಿ ಇಲ್ಲದ ಕಾರಣಕ್ಕಾಗಿಯೇ ಉದ್ಯಮಿಗಳು ಬರುತ್ತಿಲ್ಲ. ಶಾಂತಿ ನೆಮ್ಮದಿಗೆ ಬಂದ ತರುವವರನ್ನು ಒದ್ದು ಹಾಕಿದರೆ ಮಾತ್ರ ಈಗಿರುವ ಅಶಾಂತಿನಗರವನ್ನು ನಾನು ಶಾಸಕರಾದರೆ ಖಂಡಿತ ಬದಲಾಯಿಸುವೆ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಹೇಳಿದರು.

ಶಿವಮೊಗ್ಗದಲ್ಲಿ ಇದು ಗಲಭೆಗಳೆ ಇರಬಾರದು. ಪ್ರಪಂಚದ ಎಲ್ಲಾ ಉದ್ಯಮಿಗಳು ಸಾಂಸ್ಕೃತಿಕ ನಗರಕ್ಕೆ ಕಾಲಿಡಬೇಕು. ಅಂತಹ ವಾತಾವರಣವನ್ನು ನಿರ್ಮಿಸಬೇಕು ಎಂಬುದೇ ನನ್ನ ಉದ್ದೇಶವಾಗಿದೆ. ಕೋಮು ರಾಜಕಾರಣ ಕೊನೆಯಾಗಬೇಕು ಎಂದು ಕಾಂಗ್ರೆಸ್ ಪಕ್ಷದ ಯೋಗೀಶ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್. ಗೋಪಿನಾಥ್ , ಉಪಾಧ್ಯಕ್ಷರಾದ ಬಿ ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಜಂಟಿ ಕಾರ್ಯದರ್ಶಿ ಜಿ. ವಿಜಯಕುಮಾರ್, ಹಾಗೂ ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ ಎ ರಮೇಶ್ ಹೆಗ್ಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...