Friday, October 4, 2024
Friday, October 4, 2024

BJP Karnataka ಬಿಜೆಪಿ ಬದಲಿಸಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ-ಗಾಯತ್ರಿ ಶಾಂತೇಗೌಡ

Date:

BJP Karnataka ಕ್ಷೇತ್ರದಲ್ಲಿ ಯಾವುದೇ ಗುರುತರವಾದ ಅಭಿವೃದ್ದಿ ಕಾಮಗಾರಿಗಳು ನಡೆದಿಲ್ಲ. ಕೇವಲ ವೈಯಕ್ತಿಕವಾಗಿ ಸ್ಥಳೀಯ ಜನಪ್ರತಿನಿಧಿಗಳು ಲಾಭ ಮಾಡಿಕೊಳ್ಳುತ್ತಿದ್ದು ಇದು ಬದಲಾಗ ಬೇಕಾದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲಿದರೆ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಹೇಳಿದರು.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಡಾವಣೆಯ ವಕೀಲ ಪ್ರಕಾಶ್ ಅವರ ಸ್ವಗೃಹದಲ್ಲಿ ನಡೆದ ಸವಿತಾ ಸಮಾಜದಿಂದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚನಾ ಸಭೆಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಅಧಿಕಾರದ ಸಮಯದಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಕೆಲಸಗಳಾಗಿವೆ. ಅವುಗಳನ್ನು ಇದೀಗ ತಮ್ಮದೆಂದು ಹೇಳಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ದೂರಿದರು.

ಜನತೆಯು ದಿನನಿತ್ಯದ ಆಹಾರ ಪದ್ಧತಿಯಲ್ಲಿ ಒಂದೇ ರುಚಿಯನ್ನು ಸವಿದರೆ ಅಲ್ಲಗೆಳೆಯುತ್ತೇವೆ. ಆದರೆ ಸುಮಾರು ನಾಲ್ಕು ಅವಧಿಯಿಂದ ಒಂದೇ ವ್ಯಕ್ತಿಯೇ ಆಡಳಿತ ಮಾಡುತ್ತಿರುವುದು ಎಷ್ಟು ಸರಿ ಎಂದ ಅವರು ನಿತ್ಯದ ಆಹಾರದ ರುಚಿ ಬದಲಿಸಿದಂತೆ ಮತದಾನದ ವಿಷಯದಲ್ಲೂ ಬಿಜೆಪಿಯನ್ನು ಬದಲಿಸಿ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ ಉತ್ತಮ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

BJP Karnataka ಇದೀಗ ಕ್ಷೇತ್ರದಲ್ಲಿ ಬಹುತೇಕ ಸಣ್ಣ ಸಮಾಜದಿಂದ ಹಿಡಿದು ದೊಡ್ಡ ಸಮಾಜದವರೆಗೂ ಕಾಂಗ್ರೆಸ್ ಪಕ್ಷದ ಪರ ಅಲೆ ಆರಂಭವಾಗಿದೆ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಶೇ.100ರಷ್ಟು ಕಾಂಗ್ರೆಸ್ ಅಧಿಕಾರ ಚುಕ್ಕಾಣ ಹಿಡಿ ಯುವುದು ಶತಸಿದ್ಧ. ನಂತರ ದಿನಗಳಲ್ಲಿ ಎಲ್ಲಾ ಸಮುದಾಯವನ್ನು ಸೂಕ್ತ ರೀತಿಯಲ್ಲಿ ಗೌರವಿಸುವ ಕೆಲಸವಾಗ ಲಿದ್ದು. ಇದಕ್ಕೆ ತಮ್ಮಗಳ ಸಹಕಾರ ಅತ್ಯವಶ್ಯ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಮಾತನಾಡಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಜನತೆ ಅಭಿವೃದ್ದಿ ಹಾಗೂ ಶಾಶ್ವತ ಕಾಮಗಾರಿ ಕಾಣದೇ ತತ್ತರಿಸಿ ಹೋಗಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ದ ಚುಕ್ಕಾಣ ಹಿಡಿಯುವ ಮೂಲಕ ಕ್ಷೇತ್ರ ಹಾಗೂ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಸಾಗಿಸಲಿದೆ ಎಂದರು.

ಅದೇ ರೀತಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸವಿತಾ ಸಮಾ ಜವು ಬೆಂಬಲಿಸಿ ಗೆಲುವಿಗೆ ಪೂರಕವಾದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ಏಳಿಗೆಗೆ ಪ್ರಾಮಾಣ ಕವಾಗಿ ದುಡಿ ಯುವ ಜೊತೆಗೆ ಸಮಾಜದ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಜೊತೆಗಿರುವ ಭರವಸೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸವಿತಾ ಸಮಾಜದ ಗೌರವ ಅಧ್ಯಕ್ಷ ವೆಂಕಟೇಶ್, ಕಾರ್ಯಕಾರಿ ಮಂಡಳಿ ಸದಸ್ಯ ಬಾಲಕೃಷ್ಣ, ಕಾನೂನು ಸಲಹೆಗಾರ ಎಸ್.ಪ್ರಕಾಶ್, ಮಾಜಿ ಅಧ್ಯಕ್ಷ ಎನ್.ಸತೀಶ್, ಕಾರ್ಯದರ್ಶಿ ಚಂದ್ರ ಶೇಖರ್, ಮುಖಂಡರುಗಳಾದ ನಾಗರಾಜ್, ಶೇಷಾದ್ರಿ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...