Wednesday, July 8, 2026
Wednesday, July 8, 2026

Department of Minority Welfare ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ‌ ಆಹ್ವಾನ

Date:

Department of Minority Welfare ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಯು 08 ರಿಂದ 13 ವಯೋಮಾನದವರಾಗಿರದ್ದು, 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಇತ್ತಿಚಿನ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಶಾಲಾ ಘೋಷಣಾ ಪ್ರಮಾಣ ಪತ್ರದೊಂದಿಗೆ ಆಯಾ ಶಾಲೆಯಲ್ಲಿ ಅರ್ಜಿ ಸಲ್ಲಿಸುವುದು.
ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಶೇ.25% ರಷ್ಟು ದಾಖಲಾತಿ, ಇತರೆ ಸಮುದಾಯದ ಮಕ್ಕಳಿಗೆ ಶೇ.25% ರಷ್ಟು ದಾಖಲಾತಿಗಾಗಿ ಹಾಗೂ ಬಾಲಕಿಯರಿಗಾಗಿ ಶೇ.50% ಸ್ಥಾನಗಳನ್ನು ಮೀಸಲಿರಿಸಲಾಗಿದ್ದು, ನುರಿತ ಅನುಭವಿ ಶಿಕ್ಷಕರಿಂದ ಆಂಗ್ಲ ಮಾಧ್ಯಮದಲ್ಲಿ ಭೋಧನೆ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೊಟ್ ಪುಸ್ತಕ ಲೇಖನ ಸಾಮಗ್ರಿಗಳು, ಶಾಲಾ ಬ್ಯಾಗ್, ಎರಡು ಜೊತೆ ಉಚಿತ ಸಮವಸ್ತç, ಎರಡು ಜೊತೆ ಶೂ ಮತ್ತು ಸಾಕ್ಸ್, ಉಚಿತ ಬಿಸಿ ಊಟನ ವ್ಯವಸ್ಥೆ, ಉಚಿತ ಕಂಪ್ಯೂಟರ್ ತರಬೇತಿ, ಸ್ಮಾರ್ಟ್ ಕ್ಲಾಸ್, ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಸೌಲಭ್ಯ, ಸುಸಜ್ಜಿತ ಪ್ರಯೋಗಾಲಯ ಮತ್ತು ಗ್ರಂಥಾಲಯ, ವಿದ್ಯಾರ್ಥಿಗಳ ದೈಹಿಕ ವಿಕಾಸಕ್ಕಾಗಿ ಕ್ರೀಡಾ ಚಟುವಟಿಕೆ ಇತ್ಯಾದಿಗಳನ್ನು ವಿದ್ಯಾರ್ಥಿಗಳಿಗೆ ಸೌಲಭ್ಯಗಳು ನೀಡಲಾಗುವುದು.

Department of Minority Welfare ಮೌಲಾನಾ ಅಜಾದ್ ಮಾದರಿ ಶಾಲೆ ಲಷ್ಕರ್ ಮೊಹಲ್ಲಾ, ಶಿವಮೊಗ್ಗ-7676621339, ಮೌಲಾನಾ ಅಜಾದ್ ಮಾದರಿಶಾಲೆ ಬಸವೇಶ್ವರ ಸರ್ಕಲ್ ಓಲ್ಡ್ ಟೌನ್, ಭದ್ರಾವತಿ-9844081633, ಮೌಲಾನಾ ಅಜಾದ್ ಮಾದರಿ ಶಾಲೆ ಗುರುಭವನ್ ಹತ್ತಿರ, ಶಿಕಾರಿಪುರ-9886657635, ಮೌಲಾನಾ ಅಜಾದ್ ಮಾದರಿ ಶಾಲೆ ಮಟದಗದ್ದೆ, ಶಿರಾಳಕೊಪ್ಪ-9986254703,ಮೌಲಾನಾ ಅಜಾದ್ ಮಾದರಿ ಶಾಲೆ ಪ್ರೈವೇಟ್ ಬಸ್ ಸ್ಟಾಂಡ್ ಹತ್ತಿರ, ಸೊರಬ- 9743031530, ಮೌಲಾನಾ ಅಜಾದ್ ಮಾದರಿ ಶಾಲೆ ಗಾಂಧಿನಗರ, ಸಾಗರ- 9449946429, ಈ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ದಿ: 18/05/2023ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಉಚಿತವಾಗಿ ಅರ್ಜಿ ಪಡೆಯಲು ಹಾಗೂ ಮಾಹಿತಿಗಾಗಿ ಜಿಲ್ಲಾ ಮಾಹಿತಿ ಕೇಂದ್ರ 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ಶಿವಮೊಗ್ಗ-7676888388 ತಾಲ್ಲೂಕು ಮಾಹಿತಿ ಕೇಂದ್ರ ಇಂದಿರನಗರ, ಸೇಂಟ್ ಮೇರೀಸ್ ಸ್ಕೂಲ್ ಹತ್ತಿರ ತೀರ್ಥಹಳ್ಳಿ-886192835, ತಾಲ್ಲೂಕು ಮಾಹಿತಿ ಕೇಂದ್ರ ತಾಲ್ಲೂಕು ಪಂಚಾಯತ್ ಹತ್ತಿರ ಭದ್ರಾವತಿ-9538853680 ತಾಲ್ಲೂಕು ಮಾಹಿತಿ ಕೇಂದ್ರ ದೇವರಾಜ್ ಅರಸ್ ಭವನ್ ಮರುರ್ ರಸ್ತೆ ಸೊರಬ-9513815513, ತಾಲ್ಲೂಕು ಮಾಹಿತಿ ಕೇಂದ್ರ ತಾಲ್ಲೂಕು ಪಂಚಾಯತ್ 2ನೇ ಮಹಡಿ ಶಿಕಾರಿಪುರ- 7829136724 ತಾಲ್ಲೂಕು ಮಾಹಿತಿ ಕೇಂದ್ರ ತಾಲ್ಲೂಕು ಕಛೇರಿ ಹಳೆ ಡಿ.ಸಿ ಕಛೇರಿ ಹೊಸನಗರ-9008447029,ತಾಲ್ಲೂಕು ಮಾಹಿತಿ ಕೇಂದ್ರ ಇಂದಿರನಗರ ಹತ್ತಿರ ಎಸ್,ಎನ್ ನಗರ್ ಸಾಗರ-7338222902 ಗಳನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ. 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 05ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ದೂರವಾಣ :(08182) 220206, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಶಿವಮೊಗ್ಗ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಸಾಗರ 7795315517/ 7760822213/ 9900132234 ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...