Monday, December 15, 2025
Monday, December 15, 2025

BJP Karnataka ಬಂಜಾರ ಮತ್ತು ಬೋವಿ ಬಗ್ಗೆ ಸಲ್ಲದ ಹೇಳಿಕೆ ಖಂಡನೆ

Date:

BJP Karnataka ಇತ್ತೀಚೆಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಮೀಸಲಾತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಂಜಾರ ಹಾಗೂ ಭೋವಿ ಸಮಾಜದವರು ಅಪ್ರಬುದ್ಧರು ಎಂದು ಹೇಳಿಕೆ ನೀಡುವ ಮೂಲಕ ಈ ಸಮಾಜಗಳನ್ನು ಅಪಮಾನಿಸಿರುವುದಕ್ಕೆ ಭೋವಿ ಸಮಾಜದ ಮುಖಂಡ ಎಸ್. ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆ.ಬಿ. ಅಶೋಕ ನಾಯ್ಕ ಭೋವಿ ಮತ್ತು ಲಂಬಾಣಿ (ಬಂಜಾರ) ಸಮುದಾಯಗಳ ಮತ ಪಡೆದು, ಮೀಸಲಾತಿ ಕ್ಷೇತ್ರದಿಂದಲೇ ಆಯ್ಕೆಯಾಗಿದ್ದು, ಈಗ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಉಂಡ ಮನೆಗೆ ದ್ರೋಹ ಬಗೆಯುವಂತೆ ಮನಸ್ಸಿಗೆಬಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅಕ್ಷಮ್ಯ ಎಂದಿದ್ದಾರೆ.

BJP Karnataka ಸಂವಿಧಾನ ಮೀಸಲಾತಿಗೆ ಅವಕಾಶ ನೀಡಿರದಿದ್ದರೆ ಕೆ.ಬಿ. ಅಶೋಕನಾಯ್ಕ ಶಾಸಕನಾಗುವುದು ಅಸಾಧ್ಯವಾಗಿತ್ತು. ನಮ್ಮ ಸಮುದಾಯಗಳಿಗೆ ಅನ್ಯಾಯವಾದಾಗ ಅನ್ಯಾಯಕ್ಕೊಳಗಾದವರ ಬೆಂಬಲಕ್ಕೆ ನಿಲ್ಲಬೇಕಿತ್ತು. ಆದರೆ, ಹಾಗೆ ಮಾಡದ ಶಾಸಕ ಭೋವಿ ಮತ್ತು ಲಂಬಾಣಿ ಸಮುದಾಯಗಳನ್ನು ಅಪಮಾನಿಸಿದ್ದಾರೆ ಎಂದಿದ್ದಾರೆ.

ಭೋವಿ ಕಾಲೋನಿಗಳಲ್ಲಿ ಹಾಗೂ ಬಂಜಾರ ತಾಂಡಾಗಳಲ್ಲಿ ಅಶೋಕನಾಯ್ಕ ಮತಯಾಚನೆಗೆ ಬಂದಾಗ ಯಾರೂ ತಾಂಡಾ-ಕಾಲೋನಿಗಳಿಗೆ ಪ್ರವೇಶ ನೀಡಬಾರದು. ಬಿಜೆಪಿ ಅಭ್ಯರ್ಥಿಯಾದ ಇವರನ್ನು ಚುನಾವಣೆಯಲ್ಲಿ ತಿರಸ್ಕರಿಸಬೇಕು ಎಂದು ಎಸ್.ಗಿರೀಶ್ ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...